ಬೆಂಗಳೂರು: ರೂಢಿಗತ ಪೆಡ್ಲರ್ನನ್ನು ಅಮೃತಹಳ್ಳಿ ಪೊಲೀಸರು ಮಾದಕ ದ್ರವ್ಯ ಅಕ್ರಮ ಸಾಗಾಣೆ ತಡೆ ಕಾಯ್ದೆ (ಪಿಐಟಿ-ಎನ್ಡಿಪಿಎಸ್) ಅಡಿ ಬಂಧಿಸಿದ್ದಾರೆ.
ರಿಚ್ಮಂಡ್ ಟೌನ್ನ ಅಮೀರ್ ಖಾನ್ (35) ಬಂಧಿತ ಪೆಡ್ಲರ್. 3 ವರ್ಷಗಳಿಂದ ಕೇರಳ ಮತ್ತು ಆಂಧ್ರಪ್ರದೇಶದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ. ಸಿಸಿಬಿ ಪೊಲೀಸರು 3 ಬಾರಿ ಬಂಧಿಸಿ ಅಶೋಕನಗರ, ಪರಪ್ಪನ ಅಗ್ರಹಾರ, ಬೇಗೂರು, ಗೋವಿಂದಪುರ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಜಾಮೀನು ಪಡೆದು ಹೊರಗೆ ಬಂದಿದ್ದ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ದಂಧೆ ಮುಂದುವರಿಸಿದ್ದ. 2021ರಿಂದ 2023ರ ರವರೆಗೆ 5 ಪ್ರಕರಣಗಳು ದಾಖಲಾಗಿವೆ. ಈಶಾನ್ಯ ವಿಭಾಗದ ಡಿಸಿಪಿ ಅವರ ಸೂಚನೆ ಮೇರೆಗೆ ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಪೆಡ್ಲರ್ನನ್ನು ಬಂಧಿಸಿ ನಗರ ಪೊಲೀಸ್ ಆಯುಕ್ತರ ಆದೇಶದಂತೆ ಜೈಲಿಗೆ ಕಳುಹಿಸಿದ್ದಾರೆ. ಕನಿಷ್ಠ 1 ವರ್ಷ ಜಾಮೀನು ಸಿಗುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.