ಉಡುಪಿ: ಮಕ್ಕಳಿಗೆ ಕನ್ನಡ ಭಾಷೆ ಹಾಗೂ ಈ ಭಾಷೆಯ ವಿಶೇಷತೆಯ ಮಾಹಿತಿ ನೀಡಲು ಹಾಗೂ ಕನ್ನಡದ ನಾಡು-ನುಡಿ ಅರಿವು ಮೂಡಿಸುವ ಸಲುವಾಗಿ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಇದಕ್ಕಾಗಿಯೇ ನಾಡಿನ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದು, ಆಟದ ಮೂಲಕ ಮಕ್ಕಳಿಗೆ ಈ ಶಿಬಿರದಲ್ಲಿ ಹೊಸ ಬಗೆಯ ಶಿಕ್ಷಣ ಕಲಿಸಲಾಗುವುದು ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ತಿಳಿಸಿದರು.
ಉಡುಪಿಯ ಕುಂಜಿಬೆಟ್ಟು ಪರಿಸರದ ಐಡನ್ ಸ್ಟೆ ಹೋಮ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಹಾಗೂ ಸುನಾಗ್ ಆಸ್ಪತ್ರೆ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ನವ್ಯಹಿತ ಬೇಸಿಗೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಖ್ಯಾತ ಜಾದೂಗಾರ ಪ್ರೊ.ಶಂಕರ್ ಶಿಬಿರ ಉದ್ಘಾಟಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಪರಿಸರ ಪ್ರೇಮಿ ತೇಜಸ್ವಿ ಆಚಾರ್ಯ, ಪ್ರಸಿದ್ಧ ಜಾದೂಗಾರ ಜೂ. ಶಂಕರ್ ಉಪಸ್ಥಿತರಿದ್ದರು.
ಶಿಬಿರದ ನಿರ್ದೇಶಕ ಡಾ. ನರೇಂದ್ರ ಕುಮಾರ್ ಎಚ್.ಎಸ್. ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಡಾ.ವೀಣಾ ನರೇಂದ್ರಕುಮಾರ್ ವಂದಿಸಿದರು. ಸಾಹಿತಿ ಎಚ್.ಎಸ್. ನವೀನಕುಮಾರ್ ಹೊಸದುರ್ಗ ಕಾರ್ಯಕ್ರಮ ನಿರೂಪಿಸಿದರು. ಹಲವಾರು ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.