ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ನಟ ದರ್ಶನ್ ಅಭಿಮಾನಿಗಳು ಹಲ್ಲೆ ನಡೆಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ನಟ ದರ್ಶನ ಹುಟ್ಟುಹಬ್ಬದ ದಿನ ಪೊಲೀಸರ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ.
ದೇವರಾಜ್ ಎಂಬ ಪೊಲೀಸ್ ಪೇದೆಗೆ ದುಷ್ಕರ್ಮಿಗಳು ಗುದ್ದಿದ್ದಾರೆ. ದೇವರಾಜ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಆರ್.ಆರ್.ನಗರದ ಐಡಿಯಲ್ ಹೋಮ್ ಲೇಔಟ್ ಬಳಿ ಘಟನೆ ನಡೆದಿದೆ. ನಟ ದರ್ಶನ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.
ಈ ವೇಳೆ ನೂಕುನುಗ್ಗಲು ಉಂಟಾಗಿ ನಿಯಂತ್ರಿಸುವಾಗ ಪೇದೆ ದೇವರಾಜ್ಗೆ ಅಭಿಮಾನಗಳ ಗುಂಪಿನಲ್ಲಿದ್ದ ದುಷ್ಕರ್ಮಿಗಳು ಪಂಚ್ ಮಾಡಿದ್ದಾರೆ.
ದರ್ಶನ ಅಭಿಮಾನಿಗಳು ಹಾಗೂ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜರಾಜೇಶ್ವರಿನಗರದ ಪೊಲೀಸ್ ಠಾಣೆಯಲ್ಲಿ ಪೇದೆ ದೇವರಾಜ್ ದೂರು ದಾಖಲಿಸಿದ್ದಾರೆ. ಗಾಯಾಳು ದೇವರಾಜ್ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ.