ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್ಆರ್ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್ನ ಹಿರಿಯ ನಾಯಕ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್)