ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅಕಾಲಿಕವಾಗಿ ವಿಧಿವಶರಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಸೊಸೆ ಸ್ಮಿತಾ, ಮೇಘನಾ ರಾಜ್ ಸರ್ಜಾರವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.
ದಿವಂಗತ ರಾಕೇಶ್ ಸಿದ್ದರಾಮಯ್ಯರವರ ಪತ್ನಿ ಸ್ಮಿತಾ ಗುರುವಾರ ಮೇಘನಾ ಅವರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕೆಲಕಾಲ ಕುಟುಂಬದವರೊಟ್ಟಿಗೆ ಉಭಯಕುಶಲೋಪರಿ ನಡೆಸಿದರು.
ಇದನ್ನೂ ಓದಿ: ಬಂದ್ರೆ ಬರಬೇಕು ಇಂಥಾ ಅದೃಷ್ಟ: ರಾತ್ರೋರಾತ್ರಿ 25 ಕೋಟಿ ರೂ. ಒಡೆಯನಾದ ಗಣಿಕೆಲಸಗಾರ!
ಭೇಟಿ ವೇಳೆ ಸ್ಮಿತಾ ಅವರಿಗೆ ಬಿಗ್ಬಾಸ್ ರಿಯಾಲಿಟಿ ಶೋ ವಿಜೇತ ಪ್ರಥಮ್ ಸಾಥ್ ನೀಡಿದರು. ಭೇಟಿ ನೀಡಿದ ಫೋಟೋಗಳನ್ನು ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)
ಚಿರು ನೆನಪು ಮತ್ತಷ್ಟು ಗಟ್ಟಿಗೊಳ್ಳಲು ಮೇಘನಾ ಮಾಡಿದ ಬದಲಾವಣೆ ಮನಕಲಕುವಂತಿದೆ