ಬೆಂಗಳೂರು: ನಾಳೆಯ ಭಾನುವಾರ ಬಿಟ್ಟು ಮುಂದಿನ ಭಾನುವಾರದಿಂದ ಪ್ರತಿ ಭಾನುವಾರವೂ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದಲ್ಲದೆ ಪ್ರತಿದಿನವೂ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ. ಈ ಕರ್ಫ್ಯೂ ನಾಳೆಯಿಂದಲೇ ಜಾರಿಗೆ ಬರಲಿದ್ದು, ಲಾಕ್ಡೌನ್ಮಾತ್ರ ಮುಂದಿನ ಭಾನುವಾರದಿಂದ ಜಾರಿಯಾಗಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಭಾನುವಾರದ ಜತೆ ಪ್ರತಿ ಶನಿವಾರವೂ ರಜೆ ನೀಡುವುದಕ್ಕೂ ಸಿಎಂ ನೇತೃತ್ವದ ಸಭೆ ಅಸ್ತು ಎಂದಿದೆ.
ಸದ್ಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಅದು ಮುಗಿದ ಬಳಿಕ, ಅಂದರೆ ಜುಲೈ 5ರ ನಂತರ ಲಾಕ್ಡೌನ್ ಮತ್ತು ಕರ್ಫ್ಯೂ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.