ಬೆಂಗಳೂರು: ನೆರೆಮನೆಯ ನಿವಾಸಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದ ರಿಂದ ನಾನು ಕೂಡ ಪ್ರತ್ಯೇಕ ವಾಸಕ್ಕೆ ಒಳಪಡುವ ಅನಿವಾರ್ಯತೆ ಎದುರಾಗಿದೆ. ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು ನಿವಾಸದ ಬಳಿ ಭೇಟಿ ಮಾಡಲು ಬರಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ.
ಇದನ್ನೂ ಓದಿ: ಕಂಬ್ಯಾಕ್ ಕಾತರದಲ್ಲಿ ಮಾನ್ಯಾ
ಯಾವುದೇ ಸಮಸ್ಯೆ ಅಥವಾ ಸಲಹೆಗಳಿದ್ದರೆ, ನನ್ನನ್ನು ಭೇಟಿ ಮಾಡುವ ಬದಲು ನೇರವಾಗಿ ನನಗೆ ಕರೆ ಮಾಡಿ ರ್ಚಚಿಸಬೇಕು ಎಂದು ಫೇಸ್ಬುಕ್ ಖಾತೆಯಲ್ಲಿ ಅವರು ಮನವಿ ಮಾಡಿದ್ದಾರೆ.