ಹರಿಯಾಣ: ಹಾಥರಸ್ ಪ್ರಕರಣ ಹಿನ್ನೆಲೆಯಲ್ಲಿ ಶನಿವಾರ ಉತ್ತರಪ್ರದೇಶಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾನುವಾರ ಪಂಜಾಬ್ ಪ್ರವಾಸದಲ್ಲಿದ್ದಾರೆ. ಈ ನಡುವೆ ಅವರು, ಕೇಂದ್ರ ಸರ್ಕಾರ ತಂದ ತಿದ್ದುಪಡಿ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಿದ್ದು, ಹಲವೆಡೆಗೆ ತೆರಳಿ ಆ ಕುರಿತು ಪ್ರಸ್ತಾಪಿಸುತ್ತಿದ್ದಾರೆ.
ಪಂಜಾಬ್ ಬಳಿಕ ರಾಹುಲ್ ಹರಿಯಾಣಕ್ಕೆ ತೆರಳಿ, ತಿದ್ದುಪಡಿ ಕಾಯ್ದೆಗಳ ಬಗ್ಗೆ ಮಾತನಾಡಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದೀಗ ಆ ಕುರಿತು ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಗೆ ಬೇರೆ ಏನೂ ಕೆಲಸ ಇಲ್ಲ, ಅದಕ್ಕೆ ಬೇರೆ ಬೇರೆ ಸ್ಥಳಗಳಿಗೆ ಹೋಗಿ ಆ ಕೆಲಸ ಮಾಡುತ್ತಿದ್ದಾರೆ. ಅವರ ಭೇಟಿ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಯಾವುದೇ ಸಂದರ್ಭದಲ್ಲೂ ನಾವು ಕಾನೂನು ಸುವ್ಯವಸ್ಥೆ ಹದಗೆಡಿಸಲು ಬಿಡುವುದಿಲ್ಲ ಎಂಬುದಾಗಿ ಖಟ್ಟರ್ ಖಡಕ್ ಆಗಿ ಹೇಳಿದ್ದಾರೆ. (ಏಜೆನ್ಸೀಸ್)
Rahul Gandhi doesn't have anything to do, so he looks for such work & visits places…We've not received any info about his visit yet. In any case, we'll not let anyone disturb law & order situation: Haryana CM on reports that Rahul Gandhi will be visiting Haryana to meet farmers pic.twitter.com/hGb4TuNQuK
— ANI (@ANI) October 4, 2020