ಸಿಂದಗಿ: ಪಟ್ಟಣದ ಅಶೋಕ ಅಲ್ಲಾಪುರ ಅವರನ್ನು ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ (ಇಂಡಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 40 ವರ್ಷಗಳಿಂದ ಆರ್ಎಸ್ಎಸ್ ಹಾಗೂ ಬಿಜೆಪಿ ರಾಜ್ಯ ಮುಖಂಡರಾಗಿ ಗುರುತರ ಜವಾಬ್ದಾರಿ ನಿಭಾಯಿಸಿರುವ ಅಲ್ಲಾಪುರ ಅವರಿಗೆ ಎರಡು ತಿಂಗಳ ಹಿಂದೆ ಕೇಂದ್ರ ಕೃಷಿ ಸಚಿವಾಲಯ ಪುಣೆಯಲ್ಲಿನ ಉಳ್ಳಾಗಡ್ಡಿ ಮತ್ತು ಬೆಳ್ಳುಳ್ಳಿ ಸಂಶೋಧನಾ ಮಂಡಳಿಗೆ ನಾಮನಿರ್ದೇಶನ ಮಾಡಿತ್ತು.