ಬೆಂಗಳೂರು: ಸರ್ಕಾರಿ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಣೆ, ಸರ್ಕಾರಿ ಕಾಲೇಜುಗಳ 2500 ಸ್ಮಾರ್ಟ್ ತರಗತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ವಿತರಿಸಿದರು. ಈ ವೇಳೆ ವಿವಿಧ ಜಿಲ್ಲೆಗಳಿಂದ ಸಚಿವ ಶ್ರೀರಾಮುಲು ಸೇರಿ ಹಲವು ಸಚಿವರು ವರ್ಚುಯಲ್ ಆಗಿ ಪಾಲ್ಗೊಂಡಿದ್ದರು.
ಪ್ರಸ್ತುತ 2500 ತರಗತಿಯನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗಿದ್ದು, ಈ ವರ್ಷದಲ್ಲಿ ಇನ್ನೂ ಆರು ಸಾವಿರ ತರಗತಿಯನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗುತ್ತದೆ ಎಂದು ಸಿಎಂ ಹೇಳಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ, ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್, ಆಯುಕ್ತ ಪ್ರದೀಪ್ ಮತ್ತಿತರರು ಹಾಜರಿದ್ದರು.
ವಿಷ ಕುಡಿದು ಪ್ರಿಯಕರನ ಮಡಿಲಲ್ಲೇ ರಕ್ತಕಾರಿ ಪ್ರಾಣಬಿಟ್ಟ ಪ್ರೇಯಸಿ! ಇವರಿಬ್ಬರ ಕಥೆ ಭಯಾನಕ