ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದರು.
- 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ
- ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ
- ರೈತ ಶಕ್ತಿ ಯೋಜನೆಗೆ 500 ಕೋಟಿ ರೂಪಾಯಿ
- ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ಉತ್ತ,, ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ
- ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ, ಜಮೀನು ಸರ್ವೆಗೆ 287 ಕೋಟಿ ಅನುದಾನ
- ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ
ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ, ವಿವಿಧ ಯೋಜನೆಗೆ ಕೋಟ್ಯಂತರ ಹಣ
ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್: ಸೂಟ್ಕೇಸ್ ಬದಲು ಫೈಲ್ ತಂದ ಸಿಎಂ