ಬೆಂಗಳೂರು: ಕರೊನಾ ಹಿನ್ನೆಲೆ ರಾಜ್ಯ ಸರ್ಕಾರ ಘೋಷಿಸಿದ ಆರ್ಥಿಕ ಪ್ಯಾಕೇಜ್ ಬೋಗಸ್ ಆಗಿದೆ. ಜನರ ದುಡ್ಡನ್ನು ಜನರಿಗೇ ಕೊಡಲು ನಿಮಗೇನು ಕಷ್ಟ? ಬಡವರಿಗೆ ಸಹಾಧನ ಕೊಡಲು ಆರ್ಥಿಕ ಸಂಕಷ್ಟ ಇದ್ಯಾ? ಸರ್ಕಾರವೇನು ಬೆವರು ಸುರಿಸಿ ದುಡಿದ ಹಣವನ್ನು ಕೊಡ್ತಿದ್ಯಾ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಟುವಾಗಿ ಪ್ರಶ್ನಿಸಿದ್ದಾರೆ.
ಸಿಎಂ ಯಡಿಯೂರಪ್ಪ ಘೋಷಿಸಿದ ವಿಶೇಷ ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಇರೋದು 20 ಸಾವಿರ ಮಂದಿ ಮಾತ್ರ ಹೂವು ಬೆಳೆಗಾರರಿದ್ದಾರೆ ಎಂದು ಹೇಗೆ ಹೇಳ್ತೀರಿ. ಹೆಕ್ಟೇರ್ಗೆ 10 ಸಾವಿರ ಸಹಾಯಧನ ಅಂದ್ರೆ ಎಕರೆಗೆ ಸಿಗೋದು ಮೂರೂವರೆ ಸಾವಿರ ರೂಪಾಯಿ. ಒಂದು ಎಕರೆಯಲ್ಲಿ ಬೆಳೆ ಬಿತ್ತನೆ ಮಾಡೋಕೆ ಎಷ್ಟು ಖರ್ಚಾಗುತ್ತೆ ಎನ್ನೋದರ ಬಗ್ಗೆಯಾದರೂ ಯೋಚಿಸಬೇಕಲ್ಲವಾ? ಇವರಿಗೆ 20 ಸಾವಿರ ರೈತರ ಪಟ್ಟಿ ಕೊಟ್ಟವರ್ಯಾರು? ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಿದೆ ಈ ಪ್ಯಾಕೇಜ್. ಇದು ಕಣ್ಣೊರೆಸುವ ತಂತ್ರ ಅಷ್ಟೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿರಿ ಕರೊನಾ ವಿಶೇಷ ಪ್ಯಾಕೇಜ್ ಘೋಷಣೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ
ಇದು ಅವೈಜ್ಞಾನಿಕ ಪರಿಹಾರವಾಗಿದೆ. ಇವರು ಕಾರ್ಮಿಕರಿಗೆ ಹಣ ಕೊಡುವುದಿಲ್ಲ. ಕಾರ್ಮಿಕರ ಎಫ್ಡಿ ಹಣದಿಂದ ಕೊಡ್ತಾರೆ ಅಷ್ಟೆ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಪ್ಯಾಕೇಜ್ ಘೋಷಿಸಬೇಕಿತ್ತು ಎಂದು ಎಚ್ಡಿಕೆ ಅಸಮಾಧಾನ ಹೊರಹಾಕಿದ್ದಾರೆ.
ಕರೊನಾ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್
ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ
ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್ಐ ಕರೊನಾಗೆ ಬಲಿ!