More

    ಇಂಟರ್ನ್​ಶಿಪ್​ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ

    ಮಂಗಳೂರು: ತನ್ನ ಕಚೇರಿಗೆ ತರಬೇತಿಗೆಂದು ಬರುತ್ತಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳೂರಿನ ಪ್ರತಿಷ್ಠಿತ ವಕೀಲನಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ ಸಂತ್ರಸ್ತೆಯ ಸ್ನೇಹಿತಿಗೆ ಬೆದರಿಕೆ ಹಾಕಿದ್ದ ಆರೋಪದಡಿ ಪವಿತ್ರಾ ಆಚಾರ್ಯ ಎಂಬುವರನ್ನ ಪೊಲೀಸರು ಬಂಧಿಸಿದ್ದಾರೆ.

    ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇತ್ತೀಚಿಗೆ ದೂರು ದಾಖಲಿಸಿದ್ದರು. ರಾಜೇಶ್​ರ ಕಚೇರಿಯಲ್ಲಿ ಇಂಟರ್ನ್​ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿಗೆ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ್ದರು. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದರು ಎಂದು ಎಂದು ರಾಜೇಶ್​ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದಾರೆ.

    ದೂರು ನೀಡುವ ಮುನ್ನ, ಅಂದರೆ ಘಟನೆಯ ಬಳಿಕ ಸಂತ್ರಸ್ತೆಗೆ ಕರೆ ಮಾಡಿರುವ ರಾಜೇಶ್​, ಕೆಲಸಕ್ಕೆ ಬರುವಂತೆ ಸಂತ್ರಸ್ತೆಯನ್ನು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಗೊತ್ತಿಲ್ಲದೆ ತಪ್ಪು ಮಾಡಿದೆ. ಇನ್ನು ಮುಂದೆ ಆ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ. ದಯವಿಟ್ಟು ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದ ಆಡಿಯೋ ವೈರಲ್​ ಆಗಿತ್ತು. ಇದೇ ಪ್ರಕರಣ ಸಂಬಂಧ ಮೊದಲ ಆರೋಪಿ ವಕೀಲ ಕೆ.ಎಸ್.ಎನ್.ರಾಜೇಶ್, ಎರಡನೇ ಆರೋಪಿ ಧ್ರುವ, ಮೂರನೇ ಆರೋಪಿ ಮಹಾಲಕ್ಷ್ಮಿ ಹೆಗ್ಡೆ ಹಾಗೂ ಇನ್ನೊಂದು ಪ್ರಕರಣದಲ್ಲಿ ಪವಿತ್ರಾ ಆಚಾರ್ಯ ಎಂಬುವರ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೊದಲ ಪ್ರಕರಣ ಅತ್ಯಾಚಾರ ಯತ್ನ, ಇನ್ನೊಂದು ಪ್ರಕರಣ ವಿಚಾರ ಬಹಿರಂಗ ಪಡಿಸದಂತೆ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿರುವುದು. ಅಶೋಕನಗರದ ಜಾಗೃತ ಮಹಿಳಾ ವೇದಿಕೆಯ ಪವಿತ್ರಾ ಆಚಾರ್ಯ ಸಂತ್ರಸ್ತೆಯ ಸ್ನೇಹಿತೆ ಬಳಿಯಿಂದ ಬೆದರಿಸಿ ಮುಚ್ಚಳಿಕೆ ಬರೆಸಿರುವುದರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಡಿ ಪವಿತ್ರಾ ಆಚಾರ್ಯ ಎಂಬುವರನ್ನ ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ರಾಜೇಶ್ ತಲೆಮರೆಸಿಕೊಂಡಿದ್ದು ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯ ದೇವರ ಫೋಟೋ ಹಿಂದಿತ್ತು ಮನಕಲಕುವ ದೃಶ್ಯ

    ಮಂಗ್ಳೂರಿನ ಪ್ರತಿಷ್ಠಿತ ವಕೀಲನ ಕರಾಳ ಮುಖ ಬಯಲು: ವಿದ್ಯಾರ್ಥಿನಿ ಜತೆಗಿನ ಫೋನ್​ ಸಂಭಾಷಣೆ ಬಹಿರಂಗ

    ಪೋರ್ನ್​ ವಿಡಿಯೋ ನೋಡುತ್ತಲೇ 6 ವರ್ಷದ ಬಾಲೆಯನ್ನ ಕೊಂದ ಮೂವರು ಅಪ್ರಾಪ್ತರು! ಬೆಚ್ಚಿಬೀಳಿಸುತ್ತೆ ಈ ಘಟನೆ

    ನಿನ್ನೆ ತಡರಾತ್ರಿ ಮಗನಿಂದಲೇ ನಡೆಯಿತು ಘೋರ ದುರಂತ: ಪ್ರೇಯಸಿ ಜತೆಗಿದ್ದ ತಂದೆ ಸೇರಿ ಇಬ್ಬರ ಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts