ಚಿಕ್ಕಬಳ್ಳಾಪುರ: ಸ್ಯಾಂಡಲ್ವುಡ್ನ ಹಿರಿಯ ನಟ ಜಗ್ಗೇಶ್ ಪುತ್ರನ ಐಷಾರಾಮಿ ಕಾರು ಗುರುವಾರ ಅಪಘಾತಕ್ಕೀಡಾಗಿದೆ.
ನವರಸ ನಾಯಕ ಜಗ್ಗೇಶ್ರ ಹಿರಿಯ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಚಿಕ್ಕಬಳ್ಳಾಪುರ ತಾಲೂಕು ರಾಷ್ಟ್ರೀಯ ಹೆದ್ದಾರಿ 7ರ ಅಗಲಗುರ್ಕಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ನುಜ್ಜು-ಗುಜ್ಜಾಗಿದೆ. ಚಿಕ್ಕಬಳ್ಳಾಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗನ ಕಾರು ಹೇಗೆ ಅಪಘಾತಕ್ಕೀಡಾಯ್ತು ಎಂಬುದರ ಬಗ್ಗೆ ಜಗ್ಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
‘ಕರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಮಗ ಯತಿರಾಜ ಹೋಗಿದ್ದ. ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರು- ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಹೋಗಿ ಬರುವಾಗ ಅಡ್ಡ ಬಂದ ನಾಯಿಯ ಪ್ರಾಣ ಕಾಪಾಡಲು ಹೋಗಿ ರಸ್ತೆ ವಿಭಜಕ್ಕೆ ಕಾರು ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಮತ್ತು ನಿಮ್ಮ ಶುಭಹಾರೈಕೆ ನನ್ನ ಮಗ ಯತಿರಾಜನಿಗೆ ಸಣ್ಣ ಗಾಯ ಆಗಿಲ್ಲ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್ ಚಾಲಕ! ಮುಂದಾಗಿದ್ದು ದುರಂತ
ಹೊಲದಲ್ಲಿ ಮೈಮರೆತ ಪ್ರೇಮಿಗಳು! ವಿಡಿಯೋ ಚಿತ್ರೀಕರಿಸಿ, ಮರಕ್ಕೆ ಕಟ್ಟಿ ಹಿಂಸಿಸಿದ ಜನ… ಬೆಚ್ಚಿಬೀಳಿಸುತ್ತೆ ಭಯಾನಕ ಘಟನೆ
ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?