More

    ಆಂಬುಲೆನ್ಸ್​-ಸ್ಕೂಟಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು

    ಚಿತ್ರದುರ್ಗ: ಆಂಬುಲೆನ್ಸ್​ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ಈರಜ್ಜನಹಟ್ಟಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

    ಚಿತ್ರದುರ್ಗದಿಂದ ಹೊಳಲ್ಕೆರೆಯತ್ತ ಆಂಬುಲೆನ್ಸ್‌ ಹೊರಟಿತ್ತು. ಹೊಳಲ್ಕೆರೆಯಿಂದ ಚಿತ್ರದುರ್ಗದತ್ತ ಸ್ಕೂಟಿ ಬರುತ್ತಿತ್ತು. ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ಈ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿ ಕುಳಿತು ತ್ರಿಬಲ್​ ರೈಡಿಂಗ್​ನಲ್ಲಿ ಬರುತ್ತಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಸುದ್ದಿ ತಿಳಿಯುತ್ತಿದ್ದಂತೆ ಅಪಘಾತ ಸ್ಥಳಕ್ಕೆ ದೌಡಾಯಿಸಿದ ಗ್ರಾಮಾಂತರ ಠಾಣೆ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಅಪಘಾತದ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿತ್ತು. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಮೃತರ ಹೆಸರು, ಅವರು ಯಾವ ಊರಿನವರು ಎಂಬ ಮಾಹಿತಿ ಬಗ್ಗೆ ಪೊಲೀಸರು ಕಲೆ ಹಾಕುತ್ತಿದ್ದಾರೆ.

    ಅಪಘಾತಕ್ಕೂ 2 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

    ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

    ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

    ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts