ಬೆಂಗಳೂರಿನ ದುರಂತ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಕುಟುಂಬ ಆತ್ಮಹತ್ಯೆ!

ದಾವಣಗೆರೆ: ಬೆಂಗಳೂರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಇಂತಹದ್ದೇ ಮತ್ತೊಂದು ದುರಂತ ದಾವಣಗೆರೆಯಲ್ಲಿ ಸಂಭವಿಸಿದೆ. ದಾವಣಗೆರೆಯ ಭಾರತ್ ಕಾಲನಿ ನಿವಾಸಿಗಳಾದ ಕೃಷ್ಣ ನಾಯಕ(35), ಇವರ ಪತ್ನಿ ಸುಮಾ(30), ಮಗು ಧ್ರುವ(6) ಮೃತ ದುರ್ದೈವಿಗಳು. ಈ ದುರ್ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕೃಷ್ಣ ನಾಯಕ ಲಾರಿ ಚಾಲಕನಾಗಿದ್ದ. ಇವರ ಪತ್ನಿ ಸುಮಾಗೆ ಹಲವು ದಿನಗಳಿಂದ ಅನಾರೋಗ್ಯ ಕಾಡುತ್ತಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ನಿರಂತರ ಅಲೆದಾಡುತ್ತಿದ್ದ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಕೆಲ ತಿಂಗಳ ಹಿಂದೆ … Continue reading ಬೆಂಗಳೂರಿನ ದುರಂತ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಕುಟುಂಬ ಆತ್ಮಹತ್ಯೆ!