ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ಉತ್ತರ ಪ್ರದೇಶ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರ ಪಾಂಡೆ ಅವರನ್ನ ನೇಮಿಸಿ ಕೇಂದ್ರ ಕಾನೂನು ಮತ್ತು ಸಂಸದೀಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಭಾರತೀಯ ಆಡಳಿತ ಸೇವೆಯ 1984ರ ಕೇಡರ್ನ ಅಧಿಕಾರಿಯಾಗಿದ್ದ ಅನೂಪ್ ಚಂದ್ರ ಪಾಂಡೆ, 2019ರ ಆಗಸ್ಟ್ನಲ್ಲಿ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಇವರನ್ನು ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿದ್ದಾರೆ.
ಚುನಾವಣಾ ಆಯೋಗದ ಮೂವರು ಮುಖ್ಯಸ್ಥರ ಪೈಕಿ ಒಂದು ಸ್ಥಾನಕ್ಕೆ ಅನೂಪ್ ಚಂದ್ರ ಅವರನ್ನು ನೇಮಿಸಲಾಗಿದೆ. ಇವರೊಂದಿಗೆ ರಾಜೀವ್ ಕುಮಾರ್ ಕೂಡ ಚುನಾವಣಾ ಆಯುಕ್ತರಾಗಿ, ಸುಶೀಲ್ ಚಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾರೆ.
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ
ಮೈಸೂರಿನಲ್ಲಿ ಇಂಜಿನಿಯರ್ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ
ತಡರಾತ್ರಿ ಬಾತ್ರೂಂನಲ್ಲಿ ರಕ್ತನಾಳ ಕೊಯ್ದುಕೊಂಡು ಕ್ರಷರ್ ಮಾಲೀಕ ಆತ್ಮಹತ್ಯೆ!