ಚೆನ್ನೈ: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 11ಕ್ಕೇರಿದ್ದು, ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಅವರ ಸ್ಥಿತಿ ಗಂಭೀರವಾಗಿದೆ. ಈ ದುರಂತ ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದ್ದು, ಬಿಪಿನ್ ರಾವತ್ ಚೇತರಿಕಾಗಿ ದೇಶಾದ್ಯಂತ ಜನರು ಪ್ರಾರ್ಥನೆ ಮಾಡುತ್ತಿದ್ದಾರೆ.
ವೆಲ್ಲಿಂಗ್ಟನ್ನ ಸೇನಾ ಶಾಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಬುಧವಾರ ಸೇನಾ ಹೆಲಿಕಾಪ್ಟರ್ನಲ್ಲಿ ಪ್ರಯಾಣ ಮಾಡುತ್ತಿದ್ದರು. ಇನ್ನೇನು ಕೆಲವೇ ಕ್ಷಣದಲ್ಲಿ ಲ್ಯಾಂಡಿಂಗ್ ಆಗಬೇಕು ಅನ್ನುವಷ್ಟರಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಹೊತ್ತಿಉರಿದ ದೃಶ್ಯ ಇದು.
ಸೇನಾ ಹೆಲಿಕಾಪ್ಟರ್ ಪತನ: ನಾಲ್ವರ ಸಾವು, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜಕ, ಉಳಿದವರಿಗಾಗಿ ಶೋಧ
ಮಂಗಳೂರಲ್ಲಿ ಮತಾಂತರ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ! ಡೆತ್ನೋಟ್ನಲ್ಲಿ ಕಣ್ಣೀರ ಕಥೆ