More

    ವಿಜಯದಶಮಿ ಹಬ್ಬದ ದಿನವೇ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

    ರಾಯಚೂರು: ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ.

    ರಾಯಚೂರು ನಗರದ ತಿಮ್ಮಪೂರ ಪೇಟೆ ನಿವಾಸಿಗಳಾದ ದೀಪಕ್ (22) ಮತ್ತು ಹುಸೇನ್(23) ಮೃತರು. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬೈಕ್​ನಲ್ಲಿ ತೆರಳುತ್ತಿದ್ದ ಇವರಿಗೆ ಯಾವುದೋ ವಾಹನ ಡಿಕ್ಕಿ ಹೊಡೆದಿದೆ ಅಥವಾ ಬೈಕ್​ ಸ್ಕಿಡ್​ ಆಗಿ ಬಿದ್ದು ಈ ಅಪಘಾತ ಸಂಭವಿಸಿರಬೇಕು ಎನ್ನಲಾಗಿದೆ. ವಿಜಯದಶಮಿ ಹಬ್ಬದ ಮೂಡ್​ನಲ್ಲಿದ್ದ ಸ್ಥಳೀಯರು ಏನೋ ಶಬ್ದವಾಯಿತೆಂದು ರಸ್ತೆ ಬಳಿ ಓಡಿಬಂದರು. ರಕ್ತಸಿಕ್ತವಾಗಿ ಬಿದ್ದಿದ್ದ ಮೂವರ ದೃಶ್ಯ ಕಂಡು ಬೆಚ್ಚಿಬಿದ್ದರು. ಕೂಡಲೇ ಆಂಬುಲೆನ್ಸ್​ಗೆ ಕರೆ ಮಾಡಿ ಗಾಯಾಳುವನ್ನ ಆಸ್ಪತ್ರೆಗೆ ರವಾನಿಸಿದರು. ಇನ್ನಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನ ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಹಿರಿಯ ನಟ, ಚಿಂತಕ ಪ್ರೊ. ಜಿ.ಕೆ.ಗೋವಿಂದ ರಾವ್ ನಿಧನ

    ಕಂದಾಯ ನಿರೀಕ್ಷಕಿ ಆತ್ಮಹತ್ಯೆ! ಮಹತ್ತರ ಕನಸು ಕಂಡಿದ್ದವಳ ಬಾಳಲ್ಲಿ ದುರಂತ

    ಗೆಳೆಯನನ್ನು ಮನೆಗೆ ಆಹ್ವಾನಿಸಿದ ವಿವಾಹಿತೆ, ಆತ ಮಲಗಿದ್ದ ವೇಳೆ ಮಾಡಬಾರದ್ದು ಮಾಡಿ ದುರಂತ ಅಂತ್ಯಕಂಡಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts