ವಿಜಯದಶಮಿ ಹಬ್ಬದ ದಿನವೇ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ
ರಾಯಚೂರು: ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ. ರಾಯಚೂರು ನಗರದ ತಿಮ್ಮಪೂರ ಪೇಟೆ ನಿವಾಸಿಗಳಾದ ದೀಪಕ್ (22) ಮತ್ತು ಹುಸೇನ್(23) ಮೃತರು. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ನಲ್ಲಿ ತೆರಳುತ್ತಿದ್ದ ಇವರಿಗೆ ಯಾವುದೋ ವಾಹನ ಡಿಕ್ಕಿ ಹೊಡೆದಿದೆ ಅಥವಾ ಬೈಕ್ ಸ್ಕಿಡ್ ಆಗಿ ಬಿದ್ದು ಈ ಅಪಘಾತ ಸಂಭವಿಸಿರಬೇಕು ಎನ್ನಲಾಗಿದೆ. ವಿಜಯದಶಮಿ ಹಬ್ಬದ ಮೂಡ್ನಲ್ಲಿದ್ದ ಸ್ಥಳೀಯರು ಏನೋ ಶಬ್ದವಾಯಿತೆಂದು ರಸ್ತೆ ಬಳಿ ಓಡಿಬಂದರು. … Continue reading ವಿಜಯದಶಮಿ ಹಬ್ಬದ ದಿನವೇ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed