ಧಾರವಾಡ: ಎರಡು ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಫಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ನವಲಗುಂದದಲ್ಲಿ ನಡೆದಿದೆ.
ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಆನಂದ ಸಿದ್ದಗಿರಿ(35) ಮತ್ತು ಸುಷ್ಮಾ ಸಿದ್ದಗಿರಿ(32) ಮೃತ ದುರ್ದೈವಿಗಳು. ಈ ದಂಪತಿಯ ಮೂರು ವರ್ಷದ ಮಗ ಶರತ್ಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಹಾಗಾಗಿ ಬೈಕ್ನಲ್ಲಿ ಮಗನನ್ನು ಕರೆದುಕೊಂಡು ನವಲಗುಂದ ಆಸ್ಪತ್ರೆಗೆ ದಂಪತಿ ಹೋಗುತ್ತಿದ್ದರು. ಮಾರ್ಗಮಧ್ಯೆ ನವಲಗುಂದ-ನರಗುಂದ ರಸ್ತೆಯಲ್ಲಿ ಜವರಾಯನಂತೆ ಬಂದ ಟಿಪ್ಪರ್ ದಂಪತಿಯ ಪ್ರಾಣ ತೆಗೆದಿದೆ. ಮಗು ಅಪಾಯದಿಂದ ಪಾರಾಗಿದೆ.
ಇದೇ ವೇಳೆ ಮತ್ತೊಂದು ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಮಗು ಶರತ್ಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯಲಾಗಿದೆ. ಏನೂ ಅರಿಯದ ವಯಸ್ಸಲ್ಲಿ ಅಪ್ಪ-ಅಮ್ಮನನ್ನು ಕಳೆದುಕೊಂಡು ಮಗು ತಬ್ಬಲಿಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಣಕ್ಕಾಗಿ ಒಂದೂವರೆ ವರ್ಷದಲ್ಲಿ 3 ಮದ್ವೆಯಾದ ಭೂಪ! ಮೈಸೂರಿನ ವಕೀಲನ ಹಿಸ್ಟರಿ ಕೇಳಿದ್ರೆ ಬೆಚ್ಚಿಬೀಳ್ತೀರಿ