ಹುಬ್ಬಳ್ಳಿ: ಕಾಂಗ್ರೆಸ್ನ ರಾಷ್ಟ್ರ ನಾಯಕ ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಕಟೀಲ್, ರಾಹುಲ್ ಗಾಂಧಿಗೆ ಪಕ್ಷವನ್ನೇ ಸಂಭಾಳಿಸಲು ಆಗುತ್ತಿಲ್ಲ; ಸೋನಿಯಾ ಗಾಂಧಿಗೂ ಆಗುತ್ತಿಲ್ಲ. ರಾಹುಲ್ ಗಾಂಧಿ ಡ್ರಗ್ ಪೆಡ್ಲರ್. ಇದನ್ನು ನಾನು ಹೇಳುತ್ತಿಲ್ಲ. ಕೆಲ ಮಾಧ್ಯಮಗಳೇ ಹೇಳುತ್ತಿವೆ. ಕಾಂಗ್ರೆಸ್ನವರು ಪಕ್ಷ ಕಟ್ಟಲು ವಿಲವಿಲ ಒದ್ದಾಡುತ್ತಿದ್ದಾರೆ. ಇಂಥವರು ನಮ್ಮ ಪ್ರಧಾನಿ ಬಗ್ಗೆ ಹೆಬ್ಬೆಟ್ಟು ಅಂತ ಟೀಕೆ ಮಾಡ್ತಾರೆ ಎಂದು ಕಿಡಿಕಾರಿದ್ದರು. ರಾಹುಲ್ ಕುರಿತು ಕಟೀಲ್ರ ಈ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ‘ಕಟೀಲ್ ಒಬ್ಬ ಮೆಚ್ಯೂರಿಟಿ ಇಲ್ಲದ ರಾಜಕಾರಣಿ. ಅವರಿಗೆ ಮೆಂಟಲ್ ಬ್ಯಾಲೇನ್ಸ್ ಹೋಗಿದೆ. ನಿಮ್ಹಾನ್ಸ್ನಲ್ಲಿ ತೋರಿಕೊಳ್ಳೋದು ಒಳ್ಳೆಯದು. ಬಿಜೆಪಿ ವರಿಷ್ಠರು ಕಟೀಲ್ರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು. ರಾಹುಲ್ ಕುರಿತು ಅಸಂಬದ್ಧ ಹೇಳಿಕೆಯನ್ನ ಖಂಡಿಸುವೆ’ ಎಂದು ಸಿಂದಗಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿಯವ್ರನ್ನ ಆದಷ್ಟು ಬೇಗನೇ ನಶಾಮುಕ್ತಿ ಕೇಂದ್ರಕ್ಕೆ ಸೇರಿಸಬೇಕು. ಅಧಿಕಾರದ ನಶೆಯಲ್ಲಿ ಬಿಜೆಪಿ ನಾಯಕರು ತೇಲುತ್ತಿದ್ದಾರೆ. ಹೀಗಾಗಿ ಇಂಥಹ ಹೀನ ಹೇಳಿಕೆ ನೀಡ್ತಿದ್ದಾರೆ. ಗುಜರಾತ್ ಅದಾನಿ ಪೋರ್ಟ್ನಿಂದ 2 ಲಕ್ಷ ಕೋಟಿ ಮೌಲ್ಯದ 25 ಸಾವಿರ ಕೆಜಿ ಡ್ರಗ್ ಬಂತಲ್ಲ, ಅದನ್ನ ಅವರು ಸೇವಿಸಿರಬೇಕು. ಕಟೀಲ್ರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮದ ತುಂಬಿ ಹೀಗೆ ಮಾತನಾಡ್ತಿದ್ದಾರೆ ಎಂದು ರಣದೀಪ್ ಸುರ್ಜೆವಾಲಾ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿನ್ನೆ ನಾನು ಮಾತನಾಡುವಾಗ “ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜತೆಗೆ ಗೌರವಯುತವಾಗಿ ನಡೆದುಕೊಳ್ಳೋದ್ರಲ್ಲಿ ನಂಬಿಕೆಯಿದೆ” ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆ ಎಂದು ಭಾವಿಸಿದ್ದೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರು ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ ಎಂದಿದ್ದಾರೆ.
ನಳೀನ್ ಕುಮಾರ್ ಕಟೀಲ್ ಮಾನಸಿಕ ಅಸ್ವಸ್ಥ, ಕಟೀಲ್, ಯತ್ನಾಳ್, ಸಿ.ಟಿ.ರವಿ, ಅನಂತ ಕುಮಾರ್ ಹೆಗ್ಡೆ ಅಂತಹವರೇ ಇವರಿಗೆ ಹಿರೋಗಳು. ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ. ಅವರಿಗೆ ತಲೆ ಕೆಟ್ಟಿದೆ ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಸಖತ್ ವೈರಲ್ ಆಗ್ತಿರೋ ಮದ್ವೆ ಫೋಟೋ ಹಿನ್ನೆಲೆ ಗೊತ್ತಾ? ಯುವತಿ ಹೇಳಿಕೆ ಕೇಳಿದ್ರೆ ಅಚ್ಚರಿಯಾಗೋದು ಖಂಡಿತ!
ವಿಪಕ್ಷ ಹೇಳುತ್ತಿವೆ ಎಂದು ‘ಕೇಸರಿ ಬಾತ್’ ಬ್ಯಾನ್ ಮಾಡೋಕಾಗಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
ಆತ ಸಲಿಂಗಕಾಮಿ, ಅವನ ಜತೆ ಸಮಂತಾ ಸಂಬಂಧ ಬೆಳೆಸಲು ಸಾಧ್ಯವಿಲ್ಲ: ನಟಿ ಶ್ರೀರೆಡ್ಡಿ ಸ್ಫೋಟಕ ಹೇಳಿಕೆ