More

    ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್​! 40 ಪ್ರಯಾಣಿಕರು ಅಪಾಯದಿಂದ ಪಾರು

    ಬೆಂಗಳೂರು: ಸುಮಾರು 40 ಮಂದಿ ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್​ವೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಕೆ.ಆರ್​.ಮಾರುಕಟ್ಟೆ ಸಮೀಪದ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಸಂಭವಿಸಿದೆ.

    ದೀಪಾಂಜಲಿನಗರ ಡಿಪೋಗೆ ಸೇರಿದ KA57 F1592 ನಂಬರ್​ನ ಬಸ್​ ಹೊಸಕೆರೆಹಳ್ಳಿಯಿಂದ ಕೆ.ಆರ್​.ಮಾರುಕಟ್ಟೆಗೆ ಸಂಚರಿಸುತ್ತಿತ್ತು. ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಬಸ್​ ಬರುತ್ತಿದ್ದಂತೆ ಇಂಜಿನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ.. ಬೆಂಕಿ… ಎಂದು ಡ್ರೈವರ್​ ಕೂಗಿದರು. ಕೂಡಲೇ ಬಸ್​ ನಿಲ್ಲಿಸಿ ಡ್ರೈವರ್​ ಮತ್ತು ಕಂಡಕ್ಟರ್​ ಇಬ್ಬರೂ ಕೆಳಗಿಳಿದು, ಪ್ರಯಾಣಿಕರಿಗೆ ಕೆಳಗೆ ಇಳಿಯಲು ನೆರವಾದರು. ನೋಡನೋಡುತ್ತಿದ್ದಂತೆ ಬಸ್​ನಲ್ಲಿ ಬೆಂಕಿಯ ಜ್ವಾಲೆ ವ್ಯಾಪಸಿತ್ತು. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

    ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ. ಪ್ರಯಾಣಿಕರಿಗೆ ಬೇರೆ ಬಸ್​ ವ್ಯವಸ್ಥೆ ಮಾಡಿ ಕಳುಹಿಸಲಾಯಿತು. ಸ್ಥಳದಲ್ಲಿ ಕೆಲ ಹೊತ್ತು ಆತಂಕಕಾರಿ ವಾತಾವಾರಣ ನಿರ್ಮಾಣವಾಗಿತ್ತು‌.

    ರಾಜ್ಯದ ಎಲ್ಲ ಜಿಲ್ಲೆಯಲ್ಲೂ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಹಸಿರು ನಿಶಾನೆ

    ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್​ ಇನ್​ಸ್ಪೆಕ್ಟರ್​! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts