ಬೆಂಗಳೂರು: ಕರೊನಾ ಲಾಕ್ಡೌನ್ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಆರಂಭಕ್ಕೆ ದಿನಗಣನೆ ಶುರುವಾಗಿದೆ.
ಮೊದಲ ಹಂತದ ಲಾಕ್ಡೌನ್ ಸಡಿಲಿಕೆ ವೇಳೆ ಸಾರ್ವಜನಿಕ ಸಾರಿಗೆಗೆ ವಿನಾಯಿತಿ ಬೇಡ. ಬಸ್ ಸಂಚಾರ ಆರಂಬವಾದರೆ ಕರೊನಾ ಸೋಂಕು ಹೆಚ್ಚಳವಾಗಲಿದೆ. ಹೀಗಾಗಿ ಸದ್ಯಕ್ಕೆ ಬಸ್ ಸಂಚಾರಕ್ಕೆ ಅನುಮತಿ ಬೇಡ ಎಂದು ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿತ್ತು. ಇದೀಗ ನಗರದಲ್ಲಿ ಬಿಎಂಟಿಸಿ ಬಸ್ಗಳನ್ನ ರಸ್ತೆಗಿಳಿಸುವಂತೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಒತ್ತಡ ಬಂದಿದೆ. ಇದಕ್ಕೆ ಮಣಿದ ಬಿಬಿಎಂಪಿ ಜೂ.21ರಿಂದ ನಗರದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಆದರೆ ಕೆಲ ಷರತ್ತುಗಳನ್ನೂ ವಿಧಿಸಿದೆ.
ಷರತ್ತುಬದ್ಧ ಅನುಮತಿ ನೀಡಲು ಬಿಬಿಎಂಪಿ ಒಪ್ಪಿಗೆ ಸೂಚಿಸಿದ್ದು, ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಬಿಎಂಟಿಸಿ ಎಂಡಿ, ನಗರ ಪೊಲೀಸ್ ಕಮಿಷನರ್, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ.
- ಶೇ. 50 ಬಸ್ಗಳನ್ನು ಮಾತ್ರ ರಸ್ತೆಗಿಳಿಸಲು ಅನುಮತಿ
- ಬಸ್ಗಳಲ್ಲಿ ಶೇ.50 ಪ್ರಯಾಣಿಕರ ಸಂಚಾರಕ್ಕೆ ಅನುಮತಿ
- ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಡ್ಡಾಯ
- ಬಸ್ಗಳಲ್ಲಿ ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ
- ನಿಂತು ಪ್ರಯಾಣಿಸಲು ಅವಕಾಶ ಇಲ್ಲ
- ಬಸ್ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ಪೊಲೀಸ್ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳದ್ದು
- ಮೆಜೆಸ್ಟಿಕ್, ಟರ್ಮಿನಲ್ಸ್, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ
- ನೈಟ್ ಕರ್ಫ್ಯೂ ಆರಂಭಕ್ಕೂ ಮುನ್ನ 7 ಗಂಟೆ ಒಳಗೆ ಬಸ್ ಸಂಚಾರ ನಿಲ್ಲಿಸಬೇಕು
ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್ ಆಗ್ತೀರಿ
ಯೋಗೇಶ್ವರ್ ಹೇಳಿದ್ದು ಸತ್ಯ, ವಿಜಯೇಂದ್ರ ಹಸ್ತಕ್ಷೇಪ ಇದೆ, ನಾಯಕತ್ವ ಬದಲಾವಣೆ ಆಗ್ಲೇಬೇಕು…
ಗ್ರಾಮ ಪಂಚಾಯಿತಿ ಸದಸ್ಯನಿಂದಲೇ ಯುವತಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಇವನ ಕಾಮಪುರಾಣ