ಸುಲ್ತಾನಪುರ್: ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಬಂದಿದ್ದ ಕಾಮುಕರು ಇದೀಗ ಸಂತ್ರಸ್ತೆಯ ಸಹೋದರನ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿದ್ದಾರೆ.
ಸಹೋದರಿ ಮೇಲೆ ನಡೆದಿದ್ದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕಾಮುಕರ ವಿರುದ್ಧ ಆಕೆಯ ಅಣ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಇದೇ ಕಾರಣಕ್ಕಾಗಿ ಮೇಲೆ ದ್ವೇಷ ಸಾಧಿಸುತ್ತಿದ್ದ ಆರೋಪಿಗಳು ಇದೀಗ ಮರ್ಮಾಂಗ ಕತ್ತರಿಸಿದ್ದಾರೆ. ಗಾಯಾಳುವಿನ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.
2019ರಲ್ಲಿ ಯುವತಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯುವತಿಯ ಸಹೋದರ ಪ್ರಕರಣ ದಾಖಲಿಸಿದ್ದ. ಆರೋಪಿಗಳನ್ನು ಬಂಧಿಸಲಾಗಿತ್ತು. ಇತ್ತೀಚಿಗೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಆರೋಪಿಗಳು, ಅತ್ಯಾಚಾರ ಕೇಸ್ ಸಂಬಂಧ ರಾಜಿ ಮಾಡಿಕೊಳ್ಳುವಂತೆ ಯುವತಿಯ ಸಹೋದರನಿಗೆ ಬೆದರಿಕೆ ಹಾಕಿದ್ದರು. ಇದಕ್ಕೆ ಆತ ಒಪ್ಪಿರಲಿಲ್ಲ. ಸಹೋದರಿಗೆ ಆದ ಅನ್ಯಾಯಕ್ಕೆ ನ್ಯಾಯ ಸಿಗಲೇಬೇಕು, ತಪ್ಪಿತಸ್ಥರಿಗೆ ಕಾನೂನು ರೀತ್ಯ ಶಿಕ್ಷೆ ಆಗಲೇಬೇಕೆಂದಿದ್ದ. ಇದೇ ವಿಚಾರಕ್ಕೆ ದುಷ್ಕರ್ಮಿಗಳು ಆತನ ಮೇಲೆ ದ್ವೇಷ ಸಾಧಿಸುತ್ತಿದ್ದರು.
ಕಳೆದ ಜೂನ್ 26ರಂದು ಸಂತ್ರಸ್ತೆ ಸಹೋದರನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಆತನ ಜನನಾಂಗವನ್ನೇ ಕತ್ತರಿಸಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ನ್ಯಾಯ ಮತ್ತು ರಕ್ಷಣೆ ಕೋರಿ ಸಂತ್ರಸ್ತ ಕುಟುಂಬ ಸಿಎಂ ಯೋಗಿ ಆದಿತ್ಯನಾಥ್ ಅವರ ಮೊರೆ ಹೋಗಿದೆ.
ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್ ಚಾಲಕ! ಮುಂದಾಗಿದ್ದು ದುರಂತ
ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ! ಹೆತ್ತವರ ಸಾಥ್, ಮಧುಗಿರಿ ಗೌರಿಗಾಗಿ ಹುಡುಕಾಟ
ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ! ಹೆತ್ತವರ ಸಾಥ್, ಮಧುಗಿರಿ ಗೌರಿಗಾಗಿ ಹುಡುಕಾಟ
ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?