More

    ತಾಯಿ-ಮಗುವಿನ ಮೇಲೆ ಹರಿದ ಸಾರಿಗೆ ಬಸ್​!​ ಸ್ಥಳದಲ್ಲೇ ಇಬ್ಬರ ಸಾವು, ಬೆಚ್ಚಿಬಿದ್ದ ಪ್ರಯಾಣಿಕರು

    ಉಪ್ಪಿನಂಗಡಿ: ಸಾರಿಗೆ ಬಸ್​ ನಿಲ್ದಾಣದ ದ್ವಾರದಲ್ಲಿ ನಿಂತಿದ್ದ ತಾಯಿ-ಮಗುವಿನ ಮೇಲೆ ಬಸ್​ ಹರಿದಿದ್ದು, ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮಂಗಳವಾರ ಉಪ್ಪಿನಂಗಡಿ ಬಸ್​ ನಿಲ್ದಾಣದಲ್ಲಿ ಸಂಭವಿಸಿದೆ.

    ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬುವರ ಪತ್ನಿ ಶಾಹಿದಾ(25) ಮತ್ತು ಇವರ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಮಗನ ಜತೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರನ್ನ ಭೇಟಿ ಮಾಡಲು ಹೋಗುತ್ತಿದ್ದರು. ಈ ವೇಳೆ ಬಸ್ ನಿಲ್ದಾಣದ ತಿರುವಿನ ಬಳಿಯೇ ಇರುವ ನಂದಿನಿ ಹಾಲಿನ ಬೂತ್​ನ ಎದುರಿನಿಂದ ಮತ್ತೊಂದು ಕಡೆಗೆ ಮಗುವಿನ ಶಾಹಿದಾ ದಾಟಿದ್ದು, ಯಮದೂತನಂತೆ ಅತಿ ವೇಗವಾಗಿ ಬಸ್​ ನಿಲ್ದಾಣಕ್ಕೆ ಬಂದ ಬಸ್ ತಾಯಿ-ಮಗುವಿನ ತಲೆ ಮೇಲೆ ಹರಿದಿದೆ. ತಲೆ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

    ಸೋಲದೇವನಹಳ್ಳಿಯ ನಾಲ್ವರು ಮಕ್ಕಳು ಪತ್ತೆ: ಪೊಲೀಸರ ಬಳಿ ಮನದ ನೋವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಮಕ್ಕಳು

    ಜನರ- ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದ ಸರ್ಕಾರಿ ಅಧಿಕಾರಿಗಳಿಗೆ ಕಾದಿದೆ ಆಪತ್ತು

    ತರಕಾರಿ ಖರೀದಿಗೆ ಬಂದ ಟೆಕ್ಕಿಯನ್ನ ಡೇಟಿಂಗ್‌ಗೆಂದು ಮನೆಗೆ ಕರೆದೊಯ್ದ ಯುವತಿ! ಮುಂದೆ ಆಗಿದ್ದೆಲ್ಲವೂ ದುರಂತ

    ಡೆತ್​ನೋಟ್​ನಲ್ಲಿ ನಾಲ್ವರ ಹೆಸರು ಬರೆದು ಯುವತಿ ಆತ್ಮಹತ್ಯೆ! ಮದ್ವೆ ಆಗಬೇಕಿದ್ದವಳ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts