ಮುಂಡಗೋಡ: ಎದುರಿಗೆ ಬಂದ ಟಾಟಾ ಮಹೀಂದ್ರಾ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮಾವಿನಮರಕ್ಕೆ ಡಿಕ್ಕಿ ಹೊಡೆದು ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ನಂದಿಪುರ ಗ್ರಾಮದ ಬಳಿ ಶಿರಸಿ- ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.
ಶಿರಸಿಯಿಂದ ಹುಬ್ಬಳ್ಳಿಗೆ ಹೊರಟಿದ್ದ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ಗೆ ನಂದಿಪುರ ಗ್ರಾಮದ ಬಳಿ ಟಾಟಾ ಮಹೀಂದ್ರಾ ಪಿಕಪ್ ವಾಹನ ವೇಗವಾಗಿ ಬಸ್ ಮುಂದೆ ಬಂದಿದೆ. ಈ ವೇಳೆ ಬಸ್ ಚಾಲಕ ಅಪಘಾತ ತಪ್ಪಿಸಲು ಬಸ್ ಅನ್ನು ರಸ್ತೆಯ ಅಂಚಿಗೆ ಚಲಾಯಿಸಿದಾಗ ಪಕ್ಕದಲ್ಲಿದ್ದ ಮಾವಿನಮರಕ್ಕೆ ಬಸ್ ಡಿಕ್ಕಿಯಾಗಿದೆ. ಇದರಿಂದ ಬಸ್ನಲ್ಲಿನ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಹಾಯಾಳುಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಿಕಪ್ ವಾಹನ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30ಎಂಎನ್ಡಿ4.ಪೋಟೋ. ಮುಂಡಗೋಡ ತಾಲೂಕಿನ ನಂದಿಪುರ ಗ್ರಾಮದ ಬಳಿ ಮಾವಿನಮರಕ್ಕೆ ಬಸ್ ಡಿಕ್ಕಿ ಹೊಡೆದಿರುವುದು.