ವಿಜಯಪುರ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ದಾಳಿ ನಡೆದಿದ್ದು, ಲಾಂಗ್ ಹಾಗೂ ಹಾಕಿ ಸ್ಟಿಕ್ನಿಂದ ಅವರ ವಾಹನದ ಗಾಜನ್ನು ಪುಡಿಗೈಯಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಹೊರವಲಯದಲ್ಲಿ ಈ ದಾಳಿ ನಡೆದಿದೆ. ಗಂಗುಸಿಂಗ್ ರಜಪೂತ ದಾಳಿಗೊಳಗಾದ ರಿಯಲ್ ಎಸ್ಟೇಟ್ ಉದ್ಯಮಿ. ಇವರ ಮಹಿಂದ್ರ ಥಾರ್ ವಾಹನ ಜಖಂಗೊಂಡಿದೆ.
ಇದನ್ನೂ ಓದಿ: ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್ ಅಹಮದ್!
ಪಲ್ಸರ್ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದ ಹೊರವಲಯದ ಆಂಜನೇಯ ದೇವಸ್ಥಾನ ಬಳಿ ಕಾರ್ ನಿಲ್ಲಿಸಿ ಪೂಜೆ ಸಲ್ಲಿಸುವಾಗ ಜೀಪ್ ಮೇಲೆ ದಾಳಿ ನಡೆದಿತ್ತು.
ಜೀಪ್ನಲ್ಲಿ ಉದ್ಯಮಿ ಗಂಗುಸಿಂಗ್ ಇದ್ದಾನೆ ಎಂದು ಭಾವಿಸಿ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಆದರೆ ಆತ ಅದರಲ್ಲಿ ಇಲ್ಲದ ಕಾರಣ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸವನ ಬಾಗೇವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
22 ವರ್ಷ ತನ್ನೊಳಗಿದ್ದ ಹೃದಯವನ್ನು 16 ವರ್ಷಗಳ ಬಳಿಕ ಮ್ಯೂಸಿಯಮ್ನಲ್ಲಿ ಕಣ್ಣೆದುರೇ ಕಂಡಳು!