ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ಬಿಜೆಪಿಯ ಸಿ.ಎಂ.ಉದಾಸಿ ಅವರು ಕಳೆದ ಜೂನ್ 10 ರಂದು ನಿಧನರಾದರು. ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರು 2021ರ ಜನವರಿ 26ರಂದು ನಿಧನರಾದರು. ಇವರಿಬ್ಬರಿಂದ ತೆರವಾದ ಎರಡೂ ಸ್ಥಾನಕ್ಕೆ ಅಕ್ಟೋಬರ್ 30ರಂದು ಉಪ ಚುನಾವಣೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಒಟ್ಟು 3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಕ್ಕೆ ಅ.30ರಂದು ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಕೊನೇ ದಿನ ಅ.8, ನಾಮಪತ್ರ ಪರಿಶೀಲನೆ ಕಾರ್ಯ ಅ.11ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಗೆ ಕೊನೇ ದಿನ ಅ.13.
ಉಪ ಚುನಾವಣೆಗೆ ಜೆಡಿಎಸ್ ರೆಡಿ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ
ಗಂಡಂದಿರನ್ನ ಕಳ್ಕೊಂಡು ತವರಿಗೆ ಬಂದ ಮಗಳ ಕಣ್ಣಿಗೆ ಬಿತ್ತು ತಾಯಿ-ದೊಡ್ಡಪ್ಪನ ಲವ್ವಿಡವ್ವಿ… ಮುಂದಾಗಿದ್ದು ದುರಂತ