ಹಾವೇರಿಯಲ್ಲಿ ಭೀಕರ ಅಪಘಾತ: ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು, ಕಾರಲ್ಲಿದ್ದ ಶಿಕ್ಷಕ ದುರ್ಮರಣ

ಹಾವೇರಿ: ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಶಿಕ್ಷಕ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್​(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತ ದುರ್ದೈವಿಗಳು. ಜಯಪ್ರಕಾಶ್​ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಮಕ್ಕಳಾದ ಶಾಲಿನಿ ಮತ್ತು ಯಶೋದಾ ಇಬ್ಬರೂ ಸುತ್ತಕೋಟಿ ಗ್ರಾಮದ ರಸ್ತೆಬದಿಯ ಜಮೀನೊಂದರಲ್ಲಿ ಆಟವಾಡುತ್ತಾ ಕೂತಿದ್ದರು. ಜವರಾಯನಂತೆ ಬಂದ ಕಾರು, ಏನೂ ಅರಿಯದ ಮಕ್ಕಳ ಮೇಲೆ ಹರಿದು ಪ್ರಾಣ … Continue reading ಹಾವೇರಿಯಲ್ಲಿ ಭೀಕರ ಅಪಘಾತ: ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು, ಕಾರಲ್ಲಿದ್ದ ಶಿಕ್ಷಕ ದುರ್ಮರಣ