ಮೈಸೂರು: ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುಣಲಕ್ಷ್ಮೀ(35) ಮತ್ತು ದೈವಿಕ್(12) ಮೃತ ದುರ್ದೈವಿಗಳು. ಗುಣಲಕ್ಷ್ಮೀ ಅವರ ಪತಿ ಜಗದೀಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಪೂಜೆಗೆಂದು ಕುಶಾಲನಗರಕ್ಕೆ ತಂದೆ-ತಾಯಿ-ಮಗ ಮೂವರು ಕಾರಿನಲ್ಲಿ ತೆರಳಿದ್ದರು. ಪೂಜೆ ಮುಗಿಸಿಕೊಂಡು ವಾಪಸ್ ಮೈಸೂರಿಗೆ ತೆರಳಿದ್ದರು. ಮನೆಗೆ ಇನ್ನು ಒಂದು ಕಿ.ಮೀ ದೂರದಲ್ಲಿರುವಾಗ ಇಂದು ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಕಾರಿನ ಟೈಯರ್ ಬ್ಲಾಸ್ಟ್ ಆಗಿದ್ದು, ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಕಾರಿನ ಮುಂಭಾಗದ ಗಾಜಿಗೆ ಡಿಕ್ಕಿ ಹೊಡೆದು ಗುಣಲಕ್ಷ್ಮೀ ಪ್ರಾಣಬಿಟ್ಟರೆ, ಅತ್ತ ಹಿಂಬದಿ ಸೀಟ್ನಲ್ಲಿ ಕುಳಿತ್ತಿದ್ದ ಪುತ್ರ ದೈವಿಕ್ಗೆ ಸೀಟ್ ಬೆಲ್ಟ್ ಕುತ್ತಿಗೆ ಸಿಕ್ಕಿ ಹಾಕಿಕೊಂಡು ಕೊನೆಯುಸಿರೆಳೆದಿದ್ದಾನೆ.
ಮೈಸೂರಿನ ಕುವೆಂಪು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾಲಯ ಅಮಾವಾಸ್ಯೆ ದಿನವೇ ಬೆಳ್ಳಂಬೆಳಗ್ಗೆ ಸಂಭವಿಸಿದ ಈ ಅಪಘಾತಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮಹಾಲಯ ಅಮಾವಾಸ್ಯೆ ದಿನ ಹಳೇ ಮನೆ ಬಳಿ ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ! ಬೆಚ್ಚಿಬಿದ್ದ ಗ್ರಾಮಸ್ಥರು
ಮಾಲೀಕನ ಎಡವಟ್ಟಿಗೆ ರಾತ್ರೋರಾತ್ರಿ 32 ಕುಟುಂಬಗಳನ್ನ ಬೀದಿಗೆ ದಬ್ಬಿ ಮನೆಗಳಿಗೆ ಬೀಗ ಜಡಿದ ಬ್ಯಾಂಕ್ ಅಧಿಕಾರಿಗಳು
ಹಲ್ಲುಗಳಿಗೆ ಕ್ಲಿಪ್ ಹಾಕಿಸಲು ಆಸ್ಪತ್ರೆಗೆ ಹೋದ ಯುವಕ ಸಾವು! ಕೋಮಾಗೆ ದೂಡಿ ಸಾವಿಗೆ ಕಾರಣವಾದ್ರಾ ವೈದ್ಯರು?