ಚಿಕ್ಕೋಡಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು. ಇವರೆಲ್ಲರೂ ಸಂಬಂಧಿಕರ ಮದುವೆಗೆ ಹೋಗುತ್ತಿದ್ದರು.
ಅದಗೊಂಡ ಪಾಟೀಲ್ ಮತ್ತು ಛಾಯಾ ಪಾಟೀಲ್ ದಂಪತಿ, ಇವರ ಮಗ ಮಹೇಶ್ ಪಾಟೀಲ್, ಅದಗೊಂಡ ಪಾಟೀಲ್ರ ತಾಯಿ ಚಾಪ್ಪಾತಾಯಿ ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.
5 ದಿನದ ಹಿಂದೆ ಧಾರವಾಡದಲ್ಲಿ ಮದುವೆ ದಿಬ್ಬಣದ ವಾಹನ ಅಪಘಾತಕ್ಕೀಡಾಗಿ ಒಂದೇ ದಿನ 8 ಮಂದಿ ಮೃತಪಟ್ಟಿದ್ದರು. ಇದೇ ಪ್ರಕರಣದಲ್ಲಿ ಸಾವಿನ ಸಂಖ್ಯೆ 12ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ನೋಡಲಾಗ್ತಿಲ್ಲ. ಈ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಜ್ಯೋತಿಷ್ಯ ಕೇಳಿ ಹೊರ ಬಂದ ತಕ್ಷಣವೇ ಅಜ್ಜಿ-ಮೊಮ್ಮಗನಿಗೆ ಕಾದಿತ್ತು ಬಿಗ್ ಶಾಕ್!
ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…