ವ್ಯಾಪಾರಿಗಳಿಂದ ಲಂಚ ಪಡೆದ ಪ್ರಕರಣ: ಎಸಿಪಿ, ಪಿಐಗಳ ವಿರುದ್ಧ ಕೇಸ್

ಬೆಂಗಳೂರು: ಸಿಗರೇಟ್ ಸಗಟು ವ್ಯಾಪಾರಿಗಳಿಂದ ಲಕ್ಷಾಂತರ ರೂ. ಲಂಚ ಪಡೆದ ಪ್ರಕರಣದಲ್ಲಿ ಸಿಸಿಬಿ ಎಸಿಪಿ ಮತ್ತು ಇನ್​ಸ್ಪೆಕ್ಟರ್​ಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಪ್ರತ್ಯೇಕ ಮೂರು ಎಫ್​ಐಆರ್ ದಾಖಲಾಗಿವೆ. ಸಿಸಿಬಿಯ ಎಸಿಪಿ ಪ್ರಭುಶಂಕರ್ ಹಾಗೂ ಇನ್​ಸ್ಪೆಕ್ಟರ್​ಗಳಾದ ಅಜಯ್ ಮತ್ತು ನಿರಂಜನ್​ಕುಮಾರ್ ವಿರುದ್ಧ ಗುರುವಾರ ಎಫ್​ಐಆರ್ ದಾಖಲಾಗಿವೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚ ಸ್ವೀಕಾರ, ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪುರುಷರ ವಾರ್ಡ್​ನಲ್ಲಿ … Continue reading ವ್ಯಾಪಾರಿಗಳಿಂದ ಲಂಚ ಪಡೆದ ಪ್ರಕರಣ: ಎಸಿಪಿ, ಪಿಐಗಳ ವಿರುದ್ಧ ಕೇಸ್