ಕೇರವಾಡದಲ್ಲಿ ಸಂಭ್ರಮದ ಪಲ್ಲಕ್ಕಿ ಉತ್ಸವ

blank

ಹಳಿಯಾಳ: ವಿಜಯದಶಮಿ ನಿಮಿತ್ತ ತಾಲೂಕಿನ ಕೇರವಾಡ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಶನಿವಾರ ಬನ್ನಿ ಮುಡಿಯುವ ಧಾರ್ವಿುಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಶರನ್ನವರಾತ್ರಿ ಸಂದರ್ಭದಲ್ಲಿ ಪಟ್ಟಣದಿಂದ ಕೇವಲ 3 ಕಿಮೀ ಅಂತರದಲ್ಲಿರುವ ಕೆರವಾಡ ಗ್ರಾಮದಲ್ಲಿ ಗ್ರಾಮದೇವಿ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ಪ್ರಸಿದ್ಧಿ ಪಡೆದ ಧಾರ್ವಿುಕ ಕಾರ್ಯಕ್ರಮವಾಗಿದೆ. ನೂರಾರು ಭಕ್ತರು ಪಾಲ್ಗೊಂಡು ಬನ್ನಿ ಮುಡಿದು ಸಂಭ್ರಮಿಸಿದರು. ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಪಲ್ಲಕ್ಕಿ ಉತ್ಸವ ನಡೆಯಿತು. ಪಲ್ಲಕ್ಕಿ ಉತ್ಸವವು ಬನ್ನಿ ಮುಡಿಯುವ ಸ್ಥಳಕ್ಕೆ ತೆರಳಿತು. ಬಳಿಕ ಅಲ್ಲಿಂದ ಬನ್ನಿ ಮುಡಿದು ದೇವಿಯ ಪಲ್ಲಕ್ಕಿ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಗ್ರಾಮದ ಮಹಿಳೆಯರು ದೇವಿಗೆ ಉಡಿ ತುಂಬಿ ಹಣ್ಣು-ಕಾಯಿ ನೈವೇದ್ಯ ಸರ್ಮಪಿಸಿದರು.

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…