ನವದೆಹಲಿ: ಸೂರ್ಯಾಸ್ತದ ಬಳಿಕವೂ ಶವ ಪರೀಕ್ಷೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಹಗಲಿನಲ್ಲಿ ಮಾತ್ರವೇ ಪೋಸ್ಟ್ಮಾರ್ಟಂ ನಡೆಸಲು ಅವಕಾಶವಿತ್ತು. ಸದ್ಯ ಸೂರ್ಯಾಸ್ತದ ನಂತರ ಮರಣೋತ್ತರ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ನಿಯಮ 2021ರ ನವೆಂಬರ್ 15ರಿಂದ ಜಾರಿಯಲ್ಲಿದೆ.
ಆಸ್ಪತ್ರೆಗಳಲ್ಲಿ ಸರಿಯಾದ ಮೂಲಸೌಕರ್ಯ ಇದ್ದರೆ ಸೂರ್ಯಾಸ್ತದ ನಂತರವೂ ಪೋಸ್ಟ್ಮಾರ್ಟಂ ನಡೆಸಬಹುದು. ಅಂಗಾಂಗ ದಾನಕ್ಕೆ ಸಂಬಂಧಿಸಿದ ಪೋಸ್ಟ್ಮಾರ್ಟಂಗೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರ ಈ ಆದೇಶವನ್ನು ಸೋಮವಾರ ಪ್ರಕಟಿಸಿದೆ.
ನರಹತ್ಯೆ, ಆತ್ಮಹತ್ಯೆ, ಅತ್ಯಾಚಾರ ಮತ್ತು ಇತರೆ ಸಂದೇಹಾಸ್ಪದ ಸಾವಿನ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಪ್ರಕರಣಗಳಿಗೆ ಈ ಆದೇಶ ಅನ್ವಯ ಆಗಲಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ಮಾಂಡವೀಯ ಟ್ವೀಟ್ ಮಾಡಿದ್ದು, ಬ್ರಿಟಿಷ್ ಕಾಲದ ವ್ಯವಸ್ಥೆಯೊಂದು ಇಂದಿಗೆ ಕೊನೆಗೊಂಡಿದ್ದು, ಇನ್ನು 24 ಗಂಟೆ ಪೋಸ್ಟ್ಮಾರ್ಟಂ ಸೇವೆ ಸಿಗಲಿದೆ ಎಂದಿದ್ದಾರೆ. ಒಟ್ಟಾರೆ ಈ ಹೊಸ ಆದೇಶದಿಂದ ಮೃತರ ಕುಟುಂಬಗಳಿಗೆ ಮೃತದೇಹಗಳನ್ನು ಬಹುಬೇಗನೆ ನೀಡಲು ಹಾಗೂ ಶೀಘ್ರವಾಗಿ ಅಂಗಾಂಗ ದಾನ ಪ್ರಕ್ರಿಯೆ ಮುಗಿಸಲು ಅನುಕೂಲವಾಗಲಿದೆ
अंग्रेजो के समय की व्यवस्था खत्म!
24 घंटे हो पाएगा Post-mortem
PM @NarendraModi जी के 'Good Governance' के विचार को आगे बढ़ाते हुए, स्वास्थ्य मंत्रालय ने निर्णय लिया है कि जिन हॉस्पिटल के पास रात को Post-mortem करने की सुविधा है वो अब सूर्यास्त के बाद भी Post-mortem कर पाएँगे।
— Dr Mansukh Mandaviya (@mansukhmandviya) November 15, 2021
ಅಪಘಾತದಲ್ಲಿ ಅಪ್ಪು ಅಭಿಮಾನಿ ಸಾವು: ಕೊನೇ ಕ್ಷಣದಲ್ಲಿ ಪತ್ನಿಗೆ ಆತ ಹೇಳಿದ ಕೊನೇ ಮಾತು ಕೇಳಿದ್ರೆ ಮನಕಲಕುತ್ತೆ
ಭಾವಿ ಪತಿಯ ಹಿಂಸೆ ಸಹಿಸಲಾಗದೆ ಯುವತಿ ಆತ್ಮಹತ್ಯೆ: ಪ್ರೀ ವೆಡ್ಡಿಂಗ್ ಫೋಟೋ ಶೂಟಿಂಗ್ ವೇಳೆ ಆಗಿದ್ದೇನು?