More

    ಕುದಿಯುತ್ತಿದ್ದ ಬಿಸಿ ನೀರಿನ ಪಾತ್ರೆಗೆ ಬಿದಿದ್ದ ಮಗು ಸಾವು

    ಮೈಸೂರು: ಕುದಿಯುತ್ತಿದ್ದ ಬಿಸಿ ನೀರಿನ ಪಾತ್ರೆಗೆ ಆಕಸ್ಮಿಕವಾಗಿ ಬಿದ್ದು ಕೆ.ಆರ್.ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎರಡು ವರ್ಷದ ಮಗು ಮೃತಪಟ್ಟಿದೆ.


    ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರ್ಬಳ್ಳಿಹುಂಡಿ ಗ್ರಾಮದ ಸಿದ್ದಪ್ಪಾಜಿ-ಗಾಯತ್ರಿ ದಂಪತಿಯ ಪುತ್ರಿ ಪ್ರಕೃತಿ ಮೃತ ಮಗು.

    ಜುಲೈ 15 ರಂದು ಮನೆಯ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಕೂಲಿ ಕಾರ್ಮಿಕರಿಗಾಗಿ ಅಡುಗೆ ಮಾಡಲು ಬಿಸಿ ನೀರನ್ನು ಕುದಿಸಲಾಗುತ್ತಿತ್ತು. ಆ ವೇಳೆ ಸನಿಹದಲ್ಲೇ ಆಟವಾಡುತ್ತಿದ್ದ ಪ್ರಕೃತಿ ಕುದಿಯುತ್ತಿದ್ದ ಬಿಸಿ ನೀರಿನ ಪಾತ್ರೆಯೊಳಗೆ ಬಿದ್ದಿದ್ದರಿಂದ ತೀವ್ರ ಸುಟ್ಟ ಗಾಯಗಳಾಗಿದ್ದವು. ಕೂಡಲೇ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗಕ್ಕೆ ಪ್ರಕೃತಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಪ್ರಕೃತಿ ಮೃತಪಟ್ಟಿದ್ದಾಳೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts