ಬೆಂಗಳೂರು: ವಿಆರ್ಎಲ್ ಸಮೂಹ ಸಂಸ್ಥೆಯ ಚೇರ್ಮನ್, ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರಿಗೆ ಇಂದು(ಆಗಸ್ಟ್ 2) ಹುಟ್ಟುಹಬ್ಬದ ಸಂಭ್ರಮ. ನಾಡಿನಾದ್ಯಂತ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಗಣ್ಯರು, ಸ್ವಾಮೀಜಿಗಳು, ಸಾರ್ವಜನಿಕರು, ವಿಆರ್ಎಲ್ ಸಂಸ್ಥೆಯ ಉದ್ಯೋಗಿಗಳು-ಅವರ ಕುಟುಂಬಸ್ಥರು, ಸ್ನೇಹಿತರು ಜನ್ಮದಿನಕ್ಕೆ ಶುಭಕೋರಿದ್ದಾರೆ.
‘ರಾಜ್ಯದ ಯಶಸ್ವಿ ಉದ್ಯಮಿಗಳು ವಿಆರ್ಎಲ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಮಾಜಿ ಸಂಸದರಾದ ಆತ್ಮೀಯ ಶ್ರೀ ವಿಜಯ ಸಂಕೇಶ್ವರ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ’ ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಕೋರಿದ್ದಾರೆ.
ರಾಜ್ಯದ ಯಶಸ್ವಿ ಉದ್ಯಮಿಗಳು ವಿ. ಆರ್.ಎಲ್. ಸಂಸ್ಥೆಯ ಸಂಸ್ಥಾಪಕರು ಹಾಗೂ ಮಾಜಿ ಸಂಸದರಾದ ಆತ್ಮೀಯ ಶ್ರೀ ವಿಜಯ ಸಂಕೇಶ್ವರ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ದೇವರು ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. #VijaySankeshwar pic.twitter.com/06ZForzoGq
— Basavaraj S Bommai (@BSBommai) August 2, 2021
‘ಯಶಸ್ವಿ ಉದ್ಯಮಿಗಳು, ನನ್ನ ಆತ್ಮೀಯರಾದ ಶ್ರೀ ವಿಜಯ ಸಂಕೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ನಿಮ್ಮ ಮೇಲೆ ಸದಾ ಇರಲಿ’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಯಶಸ್ವಿ ಉದ್ಯಮಿಗಳು, ನನ್ನ ಆತ್ಮೀಯರಾದ ಶ್ರೀ ವಿಜಯ ಸಂಕೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ಸದಾ ಇರಲಿ. #VijaySankeshwar
— B.S. Yediyurappa (@BSYBJP) August 2, 2021
ವಿಜಯಾನಂದ ಫಸ್ಟ್ಲುಕ್ ಬಿಡುಗಡೆ; ಡಾ. ವಿಜಯ ಸಂಕೇಶ್ವರ ಅವರ ರೋಚಕ ಕಥೆ ಈಗ ಬಯೋಪಿಕ್
ಸಿಎಂ ಬೊಮ್ಮಾಯಿಗೆ ಮಹತ್ತರ ಸಲಹೆ ಕೊಟ್ಟ ಯಡಿಯೂರಪ್ಪ! ಇದರ ಹಿಂದಿನ ಮರ್ಮ ಇಲ್ಲಿದೆ
2022ರ ಮಾರ್ಚ್ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ