ಬೆಂಗಳೂರು: ನನ್ನ ಕಚೇರಿಯಲ್ಲಿ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಕೆಲಸ ಕೊಡ್ತೀನಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಶನಿವಾರ ನಡೆದ ಜನಸ್ಪಂದನ ಸಮಾವೇಶದಲ್ಲಿ ಭಟ್ಕಳದ ಪ್ರವೀಣ್ ನೆಟ್ಟಾರು ಅವರ ಗುಣಗಾನ ಮಾಡಲಾಯಿತು. ಇತ್ತೀಚಿಗೆ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಫೋಟೋ ಜತೆಗೆ ಪ್ರವೀಣ್ ನೆಟ್ಟಾರು ಫೋಟೋವನ್ನೂ ಇಟ್ಟು ಬಿಜೆಪಿ ನಾಯಕರು ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದರು. ಇದೇ ವೇಳೆ ನನ್ನ ಕಚೇರಿಯಲ್ಲಿ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಕೆಲಸ ಕೊಡ್ತೀನಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಕಳೆದ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಇವರ ಹತ್ಯೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಪ್ರವೀಣ್ ಕುಟುಂಬದ ಬೆನ್ನಿಗೆ ನಾವಿದ್ದೇವೆ ಎಂದು ಸಿಎಂ ಆ ವೇಳೆ ಅಭಯ ನೀಡಿದ್ದರು. ಅದರಂತೆ ಇಂದು ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಮಹತ್ವದ ಘೋಷಣೆ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಾಗಿದ್ದರು. ಷಡ್ಯಂತ್ರಕ್ಕೆ ಬಲಿಯಾಗಿ ಪ್ರಾಣವನ್ನೇ ಬಿಟ್ಟರು. ಅವರ ಮನೆಯವರಿಗೆ ನನ್ನ ಕಚೇರಿಯಲ್ಲೇ ಕೆಲಸ ಕೊಡ್ತೀನಿ ಎಂದು ಸಿಎಂ ಹೇಳಿದ್ದಾರೆ.
ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ
ದಸರಾ ಜಂಬೂಸವಾರಿ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಅರ್ಜುನನೇ ಮೊದಲಿಗ, ಭಾರ ಹೆಚ್ಚಿಸಿಕೊಂಡ ಭೀಮ
ಕಲಾತ್ಮಕ ಸಹಿಯ ಶಾಂತಯ್ಯ ಇನ್ನಿಲ್ಲ: ಸಾವಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಉಪನೋಂದಣಾಧಿಕಾರಿ