ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಎಲ್ಲರ ಬಳಿ ಮಾತನಾಡಿದ್ದೇನೆ. ಜಿಲ್ಲಾ ಉಸ್ತುವಾರಿ ಸ್ಥಾನ ಬದಲಾವಣೆ ಮಾಡುವ ಮುನ್ನವೂ ಅವರ ಬಳಿ ಮಾತನಾಡಿರುವೆ. ನಂತರವೂ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಇದು ನಮ್ಮ ಪಕ್ಷದ ರಾಜಕೀಯ ನೀತಿ. ಯಾವುದೇ ಅಸಮಾಧಾನ ಇಲ್ಲ. ಎಲ್ಲ ಸಚಿವರ ಬಳಿಯೂ ಮಾತನಾಡಿದ್ದೇನೆ. ಅಸಮಾಧಾನದ ಪ್ರಶ್ನೆಯೇ ಇಲ್ಲ. ಸರ್ಕಾರವನ್ನು ಅತ್ಯಂತ ಸೂಕ್ತವಾಗಿ ನಿರ್ವಹಿಸಿ, ಜನಪರ ಕೆಲಸ ಮಾಡಲು ಬದ್ಧವಾಗಿದ್ದೇವೆ. ಇದು ವಸ್ತು ಸ್ಥಿತಿ ಎಂದರು.
6 ಬಾರಿ ಗೆದ್ದರೂ ನನಗೇಕೆ ಮಂತ್ರಿ ಸ್ಥಾನ ಸಿಗ್ತಿಲ್ಲ? ಮನಸ್ಸಿಗೆ ತುಂಬಾ ನೋವಾಗ್ತಿದೆ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ