ಬೆಳಗಾವಿ: ಲೋಕಸಭಾ ಉಪ ಚುನಾವಣೆ ಮೂರು ಪಕ್ಷಕ್ಕೆ ಪ್ರತಿಷ್ಠೆಯ ಅಖಾಡವಾಗಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರನ್ನ ಶತಾಯಗತಾಯ ಗೆಲ್ಲಿಸಿಕೊಳ್ಳಲೇಬೇಕೆಂದು ಪಣತೊಟ್ಟಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೇ ಬಿರುಬಿಸಿಲನ್ನೂ ಲೆಕ್ಕಿಸದೆ ಗುರುವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಈ ವೇಳೆ ಸಿಎಂ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ, ನನ್ನ ಆರೋಗ್ಯ ಚೆನ್ನಾಗಿದ್ದು, ಯಾವುದೇ ಏರುಪೇರು ಉಂಟಾಗಿಲ್ಲ. ಜನರು ಈ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಗುರುವಾರ ಬೆಳಗ್ಗೆ ಬೆಳಗಾವಿಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಸಿಎಂ ಯಡಿಯೂರಪ್ಪ, ಖಾಸಗಿ ಹೋಟೆಲ್ನಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದರು. ಉಪಚುನಾವಣೆ ಪ್ರಚಾರಕ್ಕೂ ಮುನ್ನ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿದ ಬಳಿಕ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಜತೆಗೆ ಮಾತುಕತೆ ನಡೆಸಿದರು. ಸಚಿವ ಜಗದೀಶ್ ಶೆಟ್ಟರ್, ಸಚಿವ ಮುರಗೇಶ್ ನಿರಾಣಿ ಸಾಥ್ ನೀಡಿದರು.
ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ
ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ
ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್ ಉತ್ತರ ಕೊಟ್ಟ ಪ್ರಿಯಕರ
VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?