More

    ಸಿದ್ಧಗಂಗಾ ಶ್ರೀಗಳ ಜತೆ ಸಿಎಂ ಯಡಿಯೂರಪ್ಪ ಗೌಪ್ಯ ಚರ್ಚೆ! ರಾಜಕೀಯ ವಲಯದಲ್ಲಿ ಭಾರಿ ಸಂಚಲನ

    ತುಮಕೂರು: ಕರೊನಾ ಪ್ರಗತಿ ಪರಿಶೀಲನೆ ನೆಪದಲ್ಲಿ ತುಮಕೂರಿಗೆ ಇಂದು(ಶುಕ್ರವಾರ) ಭೇಟಿ ನೀಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಸಿದ್ಧಗಂಗಾ ಮಠಕ್ಕೆ ತೆರಳಿ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಜತೆ ಅರ್ಧಗಂಟೆಗೂ ಹೆಚ್ಚು ಕಾಲ ಗೌಪ್ಯ ಚರ್ಚೆ ನಡೆಸಿದರು. ಪಕ್ಷದೊಳಗೆ ಬಂಡಾಯದ ಹೊಗೆಯಾಡುತ್ತಿರುವ ಈ ಸಂದರ್ಭದಲ್ಲಿ ಸಿಎಂ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

    ಶ್ರೀಮಠದ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ ಬಳಿಕ ಡಿಸಿಎಂ ಅಶ್ವತ್ಥನಾರಾಯಣ್ ಜತೆ ಮಠಕ್ಕೆ ನೇರವಾಗಿ ತೆರಳಿದ ಬಿಎಸ್‌ವೈ, ಶ್ರೀಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿಸಿ, ಎಸ್ಪಿ ಸೇರಿದಂತೆ ಯಾರೊಬ್ಬರಿಗೂ ಶ್ರೀಮಠಕ್ಕೆ ಪ್ರವೇಶವಿರಲಿಲ್ಲ. ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ಇರಲಿಲ್ಲ. ಇದನ್ನೂ ಓದಿರಿ ನೀನು ಪವರ್‌ಫುಲ್​ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸು…

    ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಹಿಂದೆಯೇ ಬಿಎಸ್‌ವೈ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ಹಲವು ಬಾರಿ ಪ್ರಮುಖ ರಾಜಕೀಯ ನಿರ್ಧಾರ ತೆಗೆದುಕೊಳ್ಳುವ ಮುನ್ನ ಬಿಎಸ್‌ವೈ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿರುವುದು ಇತಿಹಾಸದ ಪುಟದಲ್ಲಿದೆ.

    ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

    ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

    ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

    ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್​ ಸಿಂಹ ಕಿಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts