ಬೆಂಗಳೂರು: ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ರಾಜೀನಾಮೆ ನೀಡಲು ನಿರ್ಧರಿಸಿರುವ ಕಾಂಗ್ರೆಸ್ ಎಂಎಲ್ಸಿ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್ಗೂ ನಮಗೂ ಮುಗಿದ ಅಧ್ಯಾಯ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ, ನಮ್ಮೇಲೆ ಇದ್ದ ಭಾರವನ್ನು ಸೋನಿಯಾ ಹಗುರ ಮಾಡಿದ್ದಾರೆ. ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟು ಕಾಂಗ್ರೆಸ್ಗೆ ಹೋಗಿದ್ದೆವು, ಜನತಾದಳ ಬಿಟ್ಟೆವು. ಈಗ ತೀರ್ಮಾನ ಕೈಗೊಳ್ಳುವ ಸಮಯ ಬಂದಿದೆ. ಹಿತೈಷಿಗಳನ್ನು ಕರೆದು ಮುಂದಿನ ತೀರ್ಮಾನ ಪ್ರಕಟಿಸುತ್ತೇವೆ ಎಂದರು.
ಚಾಮುಂಡೇಶ್ವರಿ, ಬಾದಾಮಿ ಚುನಾವಣೆ ಹಾಗೂ ಬಳ್ಳಾರಿ ಪಾದಯಾತ್ರೆಯಲ್ಲಿ ಮಾತನಾಡಿದ್ದು ದಾಖಲೆಯಲ್ಲಿದೆ. ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಹೇಳುತ್ತೇನೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುತ್ತಾರೆ ಎಂದು ತಿಳಿದು ಬಾದಾಮಿಯಲ್ಲಿ ಎಲ್ಲ ನಾಯಕರನ್ನು ಒಪ್ಪಿಸಿ ಸಿದ್ದರಾಮಯ್ಯರಿಂದ ನಾಮಪತ್ರ ಹಾಕಿಸಿದ್ದೆ. ಬಾದಾಮಿಯಲ್ಲಿ ಅವರು ಗೆದ್ದರು. ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೊರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ ಎಂದರು.
ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು
ಗಂಡನ ಬಿಟ್ಟು ಪ್ರಿಯಕರನ ಹಿಂದೆ ಹೋದಾಕೆ ದುರಂತ ಅಂತ್ಯ! ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ ಪ್ರಿಯಕರ