More

    ‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!

    ಬೆಂಗಳೂರು: ಈಕೆಯ ಪಾಲಿಗಂತೂ ಜನ್ಮದಿನವೇ ಸಾವಿನ ದಿನವಾಗಿದೆ. ಇಂಥದ್ದೊಂದು ದುರಂತ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಮನೆಯವರು ಬೇಡ ಎಂದರೂ ಕೇಳದೆ ಹೋಗಿದ್ದವಳು ಸಾವಿಗೀಡಾದಂಥ ಪ್ರಕರಣವೊಂದು ನಡೆದುಹೋಗಿದೆ.

    ಮಹಶ್ರೀ ಸಾವಿಗೀಡಾದ ಯುವತಿ. ಈಕೆ ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಜತೆಗೆ ಪಾರ್ಟ್​​ಟೈಮ್ ಆಗಿ ಟೆಕ್ಸ್​ಟೈಲ್ಸ್​ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಇವತ್ತು ಜನ್ಮದಿನದ ಖುಷಿಯಲ್ಲಿ ಈಕೆ ಹೊರಗೆ ಹೋಗಿದ್ದು, ಮನೆಯವರ ಪಾಲಿಗಂತೂ ಅದು ಶೋಕದ ದಿನವಾಗಿ ಪರಿಣಮಿಸಿದೆ.

    ಇದನ್ನೂ ಓದಿ: #MarriageStrike : ಮದುವೆ ವಿರುದ್ಧ ಪುರುಷರ ಅಭಿಯಾನ!

    ‘ಇವತ್ತು ಜನ್ಮದಿನವಾದ್ದರಿಂದ ಕೆಲಸಕ್ಕೆ ಹೋಗಬೇಡ, ಮನೆಯಲ್ಲೇ ಇರು..’ ಎಂದು ಪಾಲಕರು ಹೇಳಿದ್ದರು. ಆದರೂ ಕೇಳದ ಈಕೆ ಕೆಲಸಕ್ಕೆ ಹೊರಟಿದ್ದಳು. ನ್ಯೂ ಬಿಇಎಲ್​ ಬಸ್​ ನಿಲ್ದಾಣದವರೆಗೂ ಚಿಕ್ಕಪ್ಪನೇ ಈಕೆಯನ್ನು ಬಿಟ್ಟು ಬಂದಿದ್ದರು.

    ಇದನ್ನೂ ಓದಿ: ವಿದೇಶದಲ್ಲಿ ಸದ್ ಮಾಡ್ತಿದಾರೆ ಸಿದ್: ಆಸ್ಟ್ರೇಲಿಯನ್​ ಸಿನಿಮಾಗೆ ಕನ್ನಡಿಗನ ಸಂಗೀತ ನಿರ್ದೇಶನ

    ಆದರೆ ಆ ನಂತರ ದುರಂತವೊಂದು ಸಂಭವಿಸಿದೆ. ಅಲ್ಲಿಂದ ಈಕೆ ಗೆಳೆಯನ ಜತೆ ಬೈಕ್​ನಲ್ಲಿ ಹೋಗಿದ್ದಳು. ಆಗ ಮಾರ್ಗಮಧ್ಯೆ ಆಯತಪ್ಪಿ ಈಕೆ ಕೆಳಕ್ಕೆ ಬಿದ್ದಿದ್ದಾಳೆ. ಅದೇ ಸಮಯಕ್ಕೆ ಬರುತ್ತಿದ್ದ ಕ್ಯಾಂಟರ್​ ವಾಹನ ಯುವತಿಯ ಮೇಲೆ ಸಾಗಿದ್ದರಿಂದ ಈಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…

    ತಂದೆಯ ಚೀರಾಟ ಕೇಳಿ ಪುತ್ರ ಬಳಿಗೆ ಹೋದ; ಕೆಲವೇ ಕ್ಷಣಗಳಲ್ಲಿ ಸಾವಿಗೀಡಾದ್ರು ಅಪ್ಪ-ಮಗ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts