ಶಿರಸಿ: ಕಾರ್ಮಿಕ ಇಲಾಖೆಯು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಯುಪಿಎಸ್ಸಿ, ಕೆಪಿಎಸ್ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗೆ ಮಾ.3ರಂದು ಧಾರವಾಡದಲ್ಲಿ ಚಾಲನೆ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ.
ಕಾರ್ಮಿಕ ಇಲಾಖೆಯಲ್ಲಿ ಮೊದಲ ಬಾರಿಗೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಮಹತ್ವ ನೀಡಲಾಗಿದೆ. ಯುಪಿಎಸ್ಸಿ ಪರೀಕ್ಷೆಗಳಿಗೆ 9 ತಿಂಗಳು, ಕೆಪಿಎಸ್ಸಿ ಪರೀಕ್ಷೆಗಳಿಗೆ 7 ತಿಂಗಳು ಉಚಿತ ತರಬೇತಿ ನೀಡಲು ಕ್ರಮ ವಹಿಸಲಾಗಿದ್ದು, ಈ ಸಂಬಂಧ ಈಗಾಗಲೇ 750 ಅಭ್ಯರ್ಥಿಗಳನ್ನು ಪರೀಕ್ಷೆ ಪ್ರಾಧಿಕಾರದ ಮೂಲಕ ಆಯ್ಕೆ ಮಾಡಲಾಗಿದೆ. ಮ್ಯಾರಿಟ್ ಹಾಗೂ ರೋಸ್ಟರ್ ಪದ್ಧತಿ ಮೂಲಕ ಈ ಆಯ್ಕೆ ಮಾಡಲಾಗಿದ್ದು, ಕಲಿಕಾರ್ಥಿಗಳಿಗೆ ತಗಲುವ ವೆಚ್ಚವನ್ನು ಇಲಾಖೆಯಿಂದಲೇ ಭರಿಸಲಾಗುವುದು ಎಂದು ತಿಳಿಸಿದ್ದಾರೆ.
ತರಬೇತಿ ಸಮಯದಲ್ಲಿ ಬೆಂಗಳೂರು ಕೇಂದ್ರಿತ ವಿದ್ಯಾರ್ಥಿಗಳಿಗೆ 6 ಸಾವಿರ ರೂ., ಉಳಿದೆಡೆ 5 ಸಾವಿರ ರೂ. ಬೋಧನಾ ಸಮಯದ ವೇತನ ನೀಡಲಾಗುವುದು. ಕಾರ್ಮಿಕರ ಮಕ್ಕಳ ಶೈಣಿಕ ಪ್ರಗತಿಗೆ ಈ ತರಬೇತಿ ಮಹತ್ವದ್ದಾಗಿದೆ ಎಂದರು.
ಪೊಲೀಸರನ್ನೇ ಡ್ರಾಪ್ ಕೇಳಿ ಸಿಕ್ಕಿಬಿದ್ದ ಕಳ್ಳರು! ಇದು ಸಿನಿಮಾ ಕಥೆಯಲ್ಲ, ದೊಡ್ಡಬಳ್ಳಾಪುರದಲ್ಲಿ ಹಾಡಹಗಲೇ ನಡೆದ ಘಟನೆ