ನವದೆಹಲಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶ ಗೆದ್ದವರಿಗೆ ಶುಭಾಶಯಗಳು. ಈ ಚುನಾವಣಾ ಫಲಿತಾಂಶದಿಂದ ನಾವು ಸಾಕಷ್ಟು ವಿಚಾರ ಕಲಿತ್ತಿದ್ದೇವೆ ಎಂದಿದ್ದಾರೆ.
ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಶ್ರಮ ಹಾಗೂ ಸಮರ್ಪಣೆಗೆ ನನ್ನ ಕೃತಜ್ಞತೆಗಳು. ಈ ಫಲಿತಾಂಶದಿಂದ ನಾವು ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಉತ್ತರಪ್ರದೇಶ, ಪಂಜಾಬ್, ಗೋವಾ. ಉತ್ತರಾಖಂಡ್, ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಎರಡಂಕಿ ದಾಟಿಲ್ಲ. ಈ ರಾಜ್ಯದಲ್ಲಿ ಎಎಪಿ ಬಹುಮತ ಪಡೆಯುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ಅತ್ತ ಗೋವಾದಲ್ಲಿ ಕಾಂಗ್ರೆಸ್ ಅನ್ನು ಹಿಂದಿಕ್ಕಿರುವ ಬಿಜೆಪಿಗೆ ಮ್ಯಾಜಿಕ್ ನಂಬರ್ ದಾಟಲು ಇನ್ನು 3 ಸ್ಥಾನದ ಅಗತ್ಯವಿದೆಯಷ್ಟೆ. ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ್ನಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.
Humbly accept the people’s verdict. Best wishes to those who have won the mandate.
My gratitude to all Congress workers and volunteers for their hard work and dedication.
We will learn from this and keep working for the interests of the people of India.
— Rahul Gandhi (@RahulGandhi) March 10, 2022
ಉತ್ತರ ಪ್ರದೇಶಲ್ಲಿ ಫಲಿಸಲಿಲ್ಲ ಪ್ರಿಯಾಂಕಾ ಗಾಂಧಿ ತಂತ್ರಗಾರಿಕೆ, ಯೋಗಿ ಹವಾ ಮುಂದೆ ನೆಲಕ್ಕಚ್ಚಿದ ಕಾಂಗ್ರೆಸ್
ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ
ತುಮಕೂರು ಮಾಜಿ ಕಾರ್ಪೋರೇಟರ್ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ
ಪರಸ್ತ್ರೀ ಜತೆ ಗಂಡನ ಲವ್ವಿಡವ್ವಿ, ಪತ್ನಿಗೂ ಇತ್ತು ಅಕ್ರಮ ಸಂಬಂಧ… ಆ ರಾತ್ರಿ ನಡೆದೇ ಹೋಯ್ತು ಘೋರ ದುರಂತ