ಬೆಂಗಳೂರು: ವಿಧಾನ ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಸಚಿವ ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಗುರುವಾರ ಅಹೋರಾತ್ರಿ ಧರಣಿ ನಡೆಸಿದ ಕಾಂಗ್ರೆಸ್ ಶಾಸಕರು, ಶುಕ್ರವಾರ ಬೆಳಗ್ಗೆಯೂ ಪ್ರತಿಭಟನೆ ಮುಂದುವರಿಸಿದರು. ಸದನದ ಮುಂಭಾಗವೇ ಕಾಂಗ್ರೆಸ್ ಧರಣಿ, ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ವಾಕ್ಸಮರ ತೀವ್ರಗೊಂಡ ಹಿನ್ನೆಲೆ ಸಭಾಪತಿ ಹೊರಟ್ಟಿ ಅವರು ಪರಿಷತ್ ಕಲಾಪವನ್ನು ಮುಂದೂಡಿದರು.
ಶುಕ್ರವಾರ ಬೆಳಗ್ಗೆ ಆರಂಭದಲ್ಲಿ 10 ನಿಮಿಷ ಕಾಲ ಕಲಾಪವನ್ನು ಮುಂದೂಡಲಾಗಿತ್ತಾದರೂ ಗದ್ದಲ ನಿಲ್ಲಲಿಲ್ಲ. ಈ ನಡುವೆ ಪ್ರಶ್ನೋತ್ತರ ಕಲಾಪ ಆರಂಭವಾದರೂ ಪ್ರತಿಭಟನೆ ಮುಂದುವರಿಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಸೋಮವಾರಕ್ಕೆ ಕಲಾಪ ಮುಂದೂಡಲಾಗಿದೆ.
ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!
ತಣ್ಣಗಾಗದ ಹಿಜಾಬ್ ವಿವಾದ: ಶಾಲೆಯಲ್ಲಿ ಸರಸ್ವತಿ ಫೋಟೋ ಬೇಡ ಎಂದ ಮುಸ್ಲಿಂ ವಿದ್ಯಾರ್ಥಿನಿಯ ತಾಯಿ