ರಾಯಚೂರು: ನಗರದಲ್ಲಿ ಕಲುಷಿತ ನೀರು ಪ್ರಕರಣ ಮರಣಮೃದಂಗ ಬಾರಿಸುತ್ತಿದೆ. ನಗರಸಭೆ ಸರಬರಾಜು ಮಾಡಿದ್ದ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮತ್ತೊಂದು ಜೀವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ.
14ನೇ ವಾರ್ಡ್ನ ಮಚ್ಚಿಬಜಾರ್ ನಿವಾಸಿ ಶಮೀಮ್ ಬೇಗಂ(48) ಮೃತ ದುರ್ದೈವಿ. ಕಲುಷಿತ ನೀರು ಸೇವಿಸಿದ ಬಳಿಕ ವಾಂತಿ, ಭೇದಿ, ಕಿಡ್ನಿ ಸಮಸ್ಯೆ ಕಾಣಿಸಿಕೊಂಡು ಅಸ್ವಸ್ಥರಾದ ಶಮೀಮ್, ಮೇ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಂಪುರ ಜಲಾಶಯದಿಂದ ನಗರದ 14 ವಾರ್ಡ್ಗಳಿಗೆ ನೀರನ್ನು ಶುದ್ಧೀಕರಿಸದೆ ಪೂರೈಕೆ ಮಾಡಿದ್ದು, ಈ ನೀರು ಕುಡಿದ ಹಲವರ ಆರೋಗ್ಯ ಹದಗೆಟ್ಟಿದೆ. ಈ ನೀರನ್ನು ಕುಡಿದ ನೂರಾರು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂಬುದು ಮೇ 31ರಂದು ಬಯಲಾಗಿತ್ತು. ಅಂದೇ ಇಂದಿರಾ ನಗರದ ಮಲ್ಲಮ್ಮ(40) ವಾಂತಿಯಿಂದ ಮೃತಪಟ್ಟಿದ್ದಳು. ಮಲ್ಲಮ್ಮ ಮೃತಪಟ್ಟ ಮೂರು ದಿನಕ್ಕೆ 7 ವಾರ್ಡ್ನ ಅಬ್ದುಲ್ ಗಫೂರ್(37), ಅರಬ್ ಮೊಹಲ್ಲಾದ ಮಹ್ಮದ್ ನೂರ್(43), ಜೂ.8ರಂದು ಅಂದ್ರೂನ್ ಕಿಲ್ಲಾ ಅಬ್ದುಲ್ ಕರೀಂ ಕೊನೆಯುಸಿರೆಳೆದಿದ್ದರು. ಜೂ.10ರಂದು 13ನೇ ವಾರ್ಡ್ನ ಯರಗೆರಾ ಕಾಲನಿ ನಿವಾಸಿ ಜನಕರಾಜ್(48) ಮೃತಪಟ್ಟಿದ್ದರು. ಜೂ.14ರಂದು ನಯೀಮುದ್ದೀನ್ ಕೂಡ ಕಲುಷಿತ ನೀರಿಗೆ ಬಲಿಯಾಗಿದ್ದರು. ಇದೀಗ ಮಲ್ಲಮ್ಮ ಸಾವಿಗೂ ಮುನ್ನವೇ ಶಮೀಮ್ ಮೃತಪಟ್ಟಿದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ.
ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ