ಏಣಿ ಮೇಲೆ ಶವ ಇಟ್ಟುಕೊಂಡು ಬೈಕ್​ನಲ್ಲಿ ಸಾಗಿಸಿ ಅಂತ್ಯಕ್ರಿಯೆ! ಗ್ರಾಮಸ್ಥರ ಅಮಾನವೀಯ ವರ್ತನೆ ಕೇಳಿದ್ರೆ ಬೆಚ್ಚಿಬೀಳ್ತೀರಿ

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ‌ ಆಲದಹಳ್ಳಿಯಲ್ಲಿ ವೃದ್ಧನ ಶವವನ್ನು ಬೈಕ್​ನಲ್ಲಿ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಗ್ರಾಮದ ಮಾದೇವ(ಸುಮಾರು 65 ವರ್ಷ) ಎಂಬುವರ ಶವವನ್ನು ಬೈಕ್​ನಲ್ಲಿ ಸಾಗಿಸಲಾಗಿದೆ. ಹೆಂಡತಿ- ಮಕ್ಕಳಿಲ್ಲದ ಮಾದೇವ ಮನೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ಇವರು ಕರೊನಾದಿಂದ ಮೃತಪಟ್ಟಿರಬಹುದು ಎಂದು ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸಲು ಪಿಎಫ್​ಐ ಕಾರ್ಯಕರ್ತರಿಗೆ ಕರೆ ಮಾಡಿದ್ದರು. ಮೃತನಿಗೆ ಕರೊನಾ ಪರೀಕ್ಷೆಯನ್ನು ನಡೆಸದೆ ಸೋಂಕು ತಗುಲಿರಬಹುದು ಎಂದು ಗ್ರಾಮಸ್ಥರು ನಿರ್ಧರಿಸಿ ಶವ ಸಂಸ್ಕಾರಕ್ಕೆ ಸಹಾಯ ಮಾಡಿಲ್ಲ. ಮಾದೇವನ ಅಂತ್ಯಸಂಸ್ಕಾರ ಮಾಡಲು ಬಂದಿದ್ದ ಪಿಎಫ್​ಐ … Continue reading ಏಣಿ ಮೇಲೆ ಶವ ಇಟ್ಟುಕೊಂಡು ಬೈಕ್​ನಲ್ಲಿ ಸಾಗಿಸಿ ಅಂತ್ಯಕ್ರಿಯೆ! ಗ್ರಾಮಸ್ಥರ ಅಮಾನವೀಯ ವರ್ತನೆ ಕೇಳಿದ್ರೆ ಬೆಚ್ಚಿಬೀಳ್ತೀರಿ