ಬೆಂಗಳೂರು: ಮಹಾಮಾರಿ ಕರೊನಾ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂನಂತೆ ರಾಜ್ಯಾದಂತ ನಾಳೆ(ಏ.27) ರಾತ್ರಿ 9ರಿಂದ ಮೇ 10ರ ವರೆಗೆ ಕರ್ನಾಟಕ ಲಾಕ್ ಆಗಲಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸುತ್ತಿದ್ದಂತೆ ಲಕ್ಷಾಂತರ ಮಂದಿ ಬೆಂಗಳೂರಿಂದ ಊರುಗಳತ್ತ ಮುಖ ಮಾಡಿದ್ದಾರೆ.
ಸಾವಿರಾರು ಮಂದಿ ಮೆಜೆಸ್ಟಿಕ್ ಬಸ್, ರೈಲು ನಿಲ್ದಾಣದ ಬಳಿ ಜಮಾಯಿಸುತ್ತಿದ್ದ ದೃಶ್ಯ ಮಧ್ಯಾಹ್ನ 3.30ರಿಂದಲೇ ಕಂಡುಬಂತು. ಲಗೇಜು ಸಮೇತ ಕೂಲಿಕಾರ್ಮಿಕರು ಸ್ವಗ್ರಾಮದತ್ತ ಹೋಗಲು ಬಸ್ಗಾಗಿ ಕಾಯುತ್ತಿದ್ದರು.
ನಾಳೆ ರಾತ್ರಿ 9ರ ವರೆಗೂ ಮಾತ್ರವೇ ಎಂದಿನಂತೆ ಬಸ್ ಸಂಚಾರ ಇರಲಿದೆ. ನಂತರ ಬಸ್ಗಳು ರಸ್ತೆಗೆ ಇಳಿಯುವುದಿಲ್ಲ. ಕೆಎಸ್ಆರ್ಟಿಸಿ ಬಸ್ ಮತ್ತು ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಅಂತಾರಾಜ್ಯ ಬಸ್ ಸಂಚಾರ ಬಂದ್ ಆಗಲಿದೆ. ಮೆಟ್ರೋ ಸಂಚಾರವೂ ಇರುವುದಿಲ್ಲ. ಅಲ್ಲದೆ, ಮುಂದಿನ ಎರಡು ವಾರದಲ್ಲಿ ಪರಿಸ್ಥಿತಿ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಇದೇ ಟೈಟ್ ರೂಲ್ಸ್ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ಕೂಲಿಕಾರ್ಮಿಕರು ಇಂದೇ ಊರು ತಲುಪಲು ಗಂಟು ಮೂಟೆ ಕಟ್ಟಿಕೊಂಡು ಹೊರಟಿದ್ದಾರೆ.
ಬೆಂಗಳೂರಿನ ಪರಿಸ್ಥಿತಿ ಮಹಾರಾಷ್ಟ್ರಕ್ಕಿಂತ ಘೋರವಾಗಿದೆ ಎಂದು ಸ್ವತಃ ಸಿಎಂ ಯಡಿಯೂರಪ್ಪ ಅವರೇ ಹೇಳಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.
ಕಾರಿನಲ್ಲೇ ಟಿವಿ ಸೀರಿಯಲ್ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ
ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ