ಬೆಂಗಳೂರು: ಕರೊನಾ ಲಾಕ್ಡೌನ್ ಹಿನ್ನೆಲೆ ಕೆಲಸ ಇಲ್ಲದೆ ಲೆಕ್ಕವಿಲ್ಲದಷ್ಟು ಮಂದಿ ಬದುಕಿನ ಬಂಡಿ ಸಾಗಿಸಲು ಹರಸಾಹಸ ಪಡುತ್ತಿದ್ದಾರೆ. ಹಲವರು ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲಿ ಕನ್ನಡತಿ ಧಾರವಾಹಿ ಖ್ಯಾತಿಯ ನಟ ಕಿರಣ್ ರಾಜ್ ಅವರು ಹಸಿದವರ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಾ ಮಾನವೀಯತೆ ಮೆರೆದಿದ್ದಾರೆ.
ಕಿರುತೆರೆ ನಟ ಕಿರಣ್ ರಾಜ್ ಮತ್ತು ತಂಡವು ಕಿರಣ್ ರಾಜ್ ಫೌಂಡೇಶನ್ ಮೂಲಕ ಬೆಂಗಳೂರಿನಾದ್ಯಂತ ಹಲವಡೆ ಹಸಿದವರಿಗೆ ಊಟ ನೀಡುತ್ತಿದ್ದಾರೆ. ‘ಅನ್ನ ದೇವರಿಗಿಂತ ಇನ್ನು ದೇವರಿಲ್ಲ ಎಂಬ ಮಾತಿದೆ. ಕರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಕಿರಣ್ ಫೌಂಡೇಶನ್ ವತಿಯಿಂದ ಅವಶ್ಯಕತೆಯಿರುವ ಪ್ರತಿಯೊಬ್ಬರಿಗೂ ಪ್ರತಿನಿತ್ಯ ಎರಡು ಹೊತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಸದ್ಬಳಕೆ ಮಾಡಿಕೊಳ್ಳಿ’ ಎಂದು ಕಿರಣ್ ರಾಜ್ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಊಟ ವಿತರಣೆಯ ವಿಡಿಯೋವನ್ನೂ ಪೋಸ್ಟ್ ಮಾಡಿದ್ದಾರೆ.
ನಾಲಾಯಕ್ ಇಡು ಫೋನ್, ದೊಡ್ಡ ಕಿಸಾಮತಿ ಮಾಡ್ತಿ: ಆಕ್ಸಿಜನ್ ಬೆಡ್ ಸಿಗದೆ ನನ್ನಣ್ಣ ಸತ್ತುಹೋದ ಎಂದವನಿಗೆ ಶಾಸಕನ ಬೈಗುಳ
ಅಪ್ಪ-ಅಮ್ಮ ಕೋವಿಡ್ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ
VIDEO| ಕಾರಿನ ಮುಂದೆ ‘ಕೋವಿಡ್ ಡ್ಯೂಟಿ’ ಬೋರ್ಡ್, ಒಳಗೆ ಇದ್ದದ್ದು ಮಾತ್ರ ಅರ್ಚಕರು!